ಪುತ್ತೂರು ಶಾರದೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ

0


ಪುತ್ತೂರು: ೯೦ನೇ ವರ್ಷದ ನವರಾತ್ರಿ ಉತ್ಸವ, ಪುತ್ತೂರು ಶಾರದೋತ್ಸವದ ಪ್ರಯುಕ್ತ ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ೯ನೇ ದಿನದ ಕಾರ್ಯಕ್ರಮದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಅ.೧೧ರಂದು ನಡೆಯಿತು.
ಕೆಮ್ಮಿಂಜೆ ಬ್ರಹ್ಮಶ್ರೀ ಕಾರ್ತಿಕ್ ತಂತ್ರಿ ದೀಪ ಬೆಳಗಿಸುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾಜಿ ಶಾಸಕ ಸಂಜೀವ ಮಠಂದೂರು ಮುಖ್ಯ ಅತಿಥಿಯಾಗಿ ಆಗಮಿಸಿದ್ದು, ಮಂದಿರದ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಮಂದಿರದ ಗೌರವಾಧ್ಯಕ್ಷ ಕೆದಂಬಾಡಿಗುತ್ತು ಸೀತಾರಾಮ ರೈ, ಮಹಾವೀರ ಮೆಡಿಕಲ್ ಸೆಂಟರ್‌ನ ವೈದ್ಯ ಸುರೇಶ್ ಪುತ್ತೂರಾಯ, ಘನ ಉಪಸ್ಥಿತರಿದ್ದರು. ಶೋಭಾಯಾತ್ರೆ ಸಂಚಾಲಕ ನವೀನ್‌ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here