ಬೆಳ್ಳಂಬೆಳಗ್ಗೆ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಅನ್ಯಧರ್ಮದ ವ್ಯಕ್ತಿಗೆ ಹಲ್ಲೆ – ಹಲ್ಲೆ ನಡೆಸಿದ ನಾಲ್ವರನ್ನು ಕೆಲವೇ ಗಂಟೆಗಳಲ್ಲಿ ವಶಕ್ಕೆ ಪಡೆದ ಪೊಲೀಸರು!

0

ಪುತ್ತೂರು: ಬೆಂಗಳೂರಿನಿಂದ ಬರುತ್ತಿದ್ದ ರೈಲಿನಲ್ಲಿದ್ದ ಅನ್ಯ ಧರ್ಮದ ಸುಳ್ಯದ ವ್ಯಕ್ತಿಗೆ ಅದೇ ರೈಲಿನಲ್ಲಿ ಬಂದ ನಾಲ್ವರು ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ಹಲ್ಲೆ ನಡೆಸಿ ಪರಾರಿಯಾದ ಮತ್ತು ಹಲ್ಲೆ ನಡೆಸಿ ಪರಾರಿಯಾದ ನಾಲ್ವರನ್ನು ಸಾಲ್ಮರ ಮಸೀದಿಯೊಂದರ ಬಳಿಯಿಂದ ಪೊಲೀಸರು ಕೆಲವೇ ಕ್ಷಣದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.


ಬೆಂಗಳೂರಿನಿಂದ ಪುತ್ತೂರು ಆಗಿ ಮಂಗಳೂರು ಕಡೆ ಹೋಗುವ ರೈಲಿನಲ್ಲಿ ಕೆಲ ಮಂದಿ ಗಲಾಟೆ ಮಾಡುತ್ತಿರುವುದನ್ನು ವ್ಯಕ್ತಿಯೊಬ್ಬರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ರೈಲ್ವೇ ಪೊಲೀಸರು ಗಲಾಟೆ ಮಾಡಿ ಇತರ ಪ್ರಯಾಣಿಕರಿಗೆ ತೊಂದರೆ ಕೊಡುತ್ತಿದ್ದ ನಾಲ್ವರಿಗೆ ಎಚ್ಚರಿಕೆ ನೀಡಿದ್ದರು. ಆದರೆ ರೈಲ್ವೇ ಪೊಲೀಸರಿಗೆ ದೂರು ನೀಡಿದ ವ್ಯಕ್ತಿಯನ್ನು ಗುರಿಯಿಟ್ಟು ರೈಲು ಕಬಕ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಬಂದ ತಕ್ಷಣ ನಾಲ್ವರು ತಮ್ಮ ಮೇಲೆ ದೂರು ನೀಡಿದ ವ್ಯಕ್ತಿಗೆ ಹಿಗ್ಗಾಮುಗ್ಗ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ಕುರಿತು ಪುತ್ತೂರು ನಗರ ಠಾಣಾ ಪೊಲೀಸರಿಗೆ ಬಂದ ಮಾಹಿತಿಯಂತೆ ಪರಾರಿಯಾದ ನಾಲ್ವರನ್ನು ಸಾಲ್ಮರ ಮಸೀದಿಯ ಬಳಿಯಿಂದ ವಶಕ್ಕೆ ಪಡೆದು‌ಕೊಂಡಿರುವುದಾಗಿ ತಿಳಿದು ಬಂದಿದೆ. ಹಲ್ಲೆ ನಡೆಸಿದ ನಾಲ್ವರು ಪುತ್ತೂರಿವರೆಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here