ಗುಂಡ್ಯ: ಆಂಬುಲೆನ್ಸ್-ಈಚರ್ ಡಿಕ್ಕಿ, ಓರ್ವನಿಗೆ ಗಾಯ

0

ನೆಲ್ಯಾಡಿ: ಆಂಬುಲೆನ್ಸ್ ಹಾಗೂ ಈಚರ್ ನಡುವೆ ಡಿಕ್ಕಿ ಸಂಭವಿಸಿ ಆಂಬುಲೆನ್ಸ್ ಚಾಲಕ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಅ.12ರಂದು ಮಧ್ಯಾಹ್ನ ನಡೆದಿದೆ.

ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಆಂಬುಲೆನ್ಸ್ ಹಾಗೂ ಮಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದ ಈಚರ್ ನಡುವೆ ಗುಂಡ್ಯದಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು ಆಂಬುಲೆನ್ಸ್ ಚಾಲಕ ಮುಸ್ತಾಫ ಎಂಬವರು ಗಾಯಗೊಂಡಿದ್ದು ಶಿರಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here