ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಯುಧ ಪೂಜೆ

0

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವರ್ಷಂಪ್ರತಿ ನಡೆಯುವಂತೆ ಆಯುಧ ಪೂಜಾ ಕಾರ‍್ಯಕ್ರಮವು ವೇದಮೂರ್ತಿ ನೂಜಿಮನೆ ರಾಮಕೃಷ್ಣ ಭಟ್ ಮಿತ್ತೂರು ಇವರ ನೇತೃತ್ವದಲ್ಲಿ ವಿಜ್ರಂಭಣೆಯಿಂದ ನಡೆಯಿತು. ದೇವಿ ಆರಾಧನೆ, ದೇವಿಸ್ತೋತ್ರ ಪಠಣ, ಭಜನೆ, ಪ್ರಯೋಗಾಲಯಗಳ ಪೂಜೆ, ವಾಹನ ಪೂಜೆ ನಡೆದವು.


ಈ ಕಾರ‍್ಯಕ್ರಮದಲ್ಲಿ ವಿವೇಕಾನಂದ ಪಾಲಿಟೆಕ್ನಿಕ್‌ನ ಆಡಳಿತ ಮಂಡಳಿ ಅಧ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ ಸಂಚಾಲಕಾರದ ಮಹಾದೇವ ಶಾಸ್ತ್ರಿ, ಸದಸ್ಯರಾದ ರವಿಮುಂಗ್ಲಿಮನೆ , ಈಶ್ವರಚಂದ್ರ, ಅಗರ್ತಬೈಲು ಕೃಷ್ಣನಾಯ್ಕ ಹಾಗೂ ಪ್ರೊ.ಎ.ವಿ ನಾರಾಯಣ ಹಾಗೂ ನಮ್ಮ ಸಂಸ್ಥೆಯ ನಿವೃತ್ತ ಉಪನ್ಯಾಸಕರಾದ ವೆಂಕಟೇಶ ಭಟ್, ಸರವಣ ಮುತ್ತು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನಮ್ಮ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಮುರಳೀಧರ್.ಯಸ್, ಶಿಕ್ಷಕ- ಶಿಕ್ಷಕೇತರ ವರ್ಗದವರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದರು.

LEAVE A REPLY

Please enter your comment!
Please enter your name here