ವಿಧಾನ ಪರಿಷತ್ತು ಉಪ ಚುನಾವಣೆ- ಪುಣಚ ಬಿಜೆಪಿ ಜನಪ್ರತಿನಿಧಿಗಳ ಸಭೆ

0

ಪುಣಚ: ಅ.21ರಂದು ನಡೆಯಲಿರುವ ವಿಧಾನ ಪರಿಷತ್ತು ಉಪಚುನಾವಣೆ ಹಿನ್ನೆಲೆಯಲ್ಲಿ ಪುಣಚ ಶಕ್ತಿ ಕೇಂದ್ರದ ವತಿಯಿಂದ ಬಿಜೆಪಿ ಬೆಂಬಲಿತ ಜನ ಪ್ರತಿನಿಧಿಗಳ ಸಭೆ ಅ.18ರಂದು ಪುಣಚ ಎಸ್.ಆರ್ ರಂಗಮೂರ್ತಿ ನಿವಾಸದಲ್ಲಿ ನಡೆಯಿತು.


ವಿಧಾನ ಪರಿಷತ್ತು ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ ಮುಂಬರುವ ವಿಧಾನ ಪರಿಷತ್ತು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಕಿಶೋರ್ ಕುಮಾರ್ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಹಾಗೂ ದ.ಕ ಜಿಲ್ಲೆಯಲ್ಲಿ ಬಿಜೆಪಿಯ ಭದ್ರಕೋಟೆ ಎಂದು ಸಾಬೀತುಪಡಿಸಬೇಕಾಗಿದೆ ಎಂದರು.


ಸಭೆಯಲ್ಲಿ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಪ್ರಧಾನ ಕಾರ್ಯದರ್ಶಿ ಉಮೇಶ ಕೋಡಿಬೈಲು ಮತ್ತು ಪ್ರಶಾಂತ ನೆಕ್ಕಿಲಾಡಿ, ಕಾರ್ಯದರ್ಶಿ ಪುನೀತ್ ಮಾಡ್ತಾರು, ಪುತ್ತೂರು ಬಿಜೆಪಿ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ಮತ್ತು ವಿದ್ಯಾದರ ಜೈನ್, ದ.ಕ ಬಿಜೆಪಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಗುರುವಪ್ಪ ಪೂಜಾರಿ ದಲ್ಕಾಜೆಗುತ್ತು, ಪುಣಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ಬಾಳೆಕಲ್ಲು, ಪ್ರಧಾನ ಕಾರ್ಯದರ್ಶಿ ಕಿರಣ್ ಪೆರ್ನೆ, ಪುಣಚ ವ್ಯ.ಸೇ.ಸ.ಸಂಘದ ಅಧ್ಯಕ್ಷ ಜನಾರ್ದನ ಭಟ್, ಬಿಜೆಪಿ ಮುಖಂಡ ಸುನಿಲ್ ದಡ್ಡು, ಪುತ್ತೂರು ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ ಅಶೋಕ ಮೂಡಂಬೈಲು, ಪುಣಚ ಗ್ರಾ.ಪಂ.ಅಧ್ಯಕ್ಷೆ ಬೇಬಿ ಪಟಿಕಲ್ಲು, ಉಪಾಧ್ಯಕ್ಷ ಮಹೇಶ್ ಶೆಟ್ಟಿ, ಹಾಗೂ ಸದಸ್ಯರುಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ರಾಮಕೃಷ್ಣ ಮೂಡಂಬೈಲು ಸ್ವಾಗತಿಸಿ, ಪುಣಚ ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ ಎಂ. ಧನ್ಯವಾದ ಗೈದರು.

LEAVE A REPLY

Please enter your comment!
Please enter your name here