ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಸಂಕ್ರಮಣ ಅಂಗವಾಗಿ ಅಗೇಲು ಸೇವೆ

0

ಬಡಗನ್ನೂರು:ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ  ಕಾವೇರಿ ಸಂಕ್ರಮಣದ ಶುಭ ಸಂದರ್ಭದಲ್ಲಿ  ಸಂಕ್ರಮಣ ಪೂಜಾ ಕಾರ್ಯಕ್ರಮ, ಭಕ್ತರ ಅಗೇಲು ಸೇವೆ ಮತ್ತು ಕಲಶ ಸೇವೆ ಅ.17 ರಂದು ನಡೆಯಿತು.

ಭಕ್ತಾದಿಗಳಿಂದ  ಹರಕೆ ರೂಪದಲ್ಲಿ ಸುಮಾರು 131 ಅಗೇಲು ಸೇವೆ ಹಾಗೂ ಕಲಸ ಸೇವೆಯನ್ನು ಸ್ವಾಮಿ ಕೊರಗಜ್ಜ ಹಾಗೂ ಗುಳಿಗರಾಜನಿಗೆ ಸಲ್ಲಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸುಮಾರು 600 ಕ್ಕೂ ಮಿಕ್ಕಿ ಭಕ್ತಾದಿಗಳು ಭಾಗವಹಿಸಿ  ಅನ್ನಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಶಬರಿನಗರ, ಕಾರ್ಯದರ್ಶಿ ಪ್ರಕಾಶ್ ಮರದಮೂಲೆ, ಉಪಾಧ್ಯಕ್ಷ ಸದಾನಂದ ಬೋಳಂಕೂಡ್ಲು, ಕೋಶಾಧಿಕಾರಿ ಭಾಸ್ಕರ ಹೆಗ್ಗಡೆ ಶಬರಿನಗರ, ಪ್ರಧಾನ ಪೂಜಾ ಕರ್ಮಿ ಮಾದವ ಸಾಲಿಯಾನ್  ಶ್ರೀ ಅಯ್ಯಪ್ಪ ಭಜನಾ ಮಂದಿರ ಆಡಳಿತ ಸಮಿತಿ ಅಧ್ಯಕ್ಷ ಸೇಸಪ್ಪ ಪೂಜಾರಿ ಕಡಮಗದ್ದೆ, ಅಯುಧ ಪೂಜಾ ಸಮಿತಿ ಅಧ್ಯಕ್ಷ ಸುಂದರ ಕನ್ನಡ್ಕ, ಜಾಗೃತ ಹಿಂದೂ ಜಾಗರಣ ಸಮಿತಿ ಅಧ್ಯಕ್ಷ ಅಶೋಕ್ ಪಿ.ಎಸ್ , ಹಾಗೂಊರ ಭಕ್ತಾದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here