ಕಡಬ: ಅನಾರೋಗ್ಯ ಸಮಸ್ಯೆ- ವಿಷ ಸೇವಿಸಿದ್ದ ವ್ಯಕ್ತಿ ನಿಧನ

0

ಕಡಬ: ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮಾನಸಿಕವಾಗಿ ನೊಂದು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಿಸದೆ ಮೃಟಪಟ್ಟ ಘಟನೆ ಐತ್ತೂರಿನಲ್ಲಿ ನಡೆದಿದೆ.


ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆತ್ತೋಡಿ ನಿವಾಸಿ ಪರಮಶಿವಂ (65) ಮೃತಪಟ್ಟವರು.
ಕೃಷಿ ಕೆಲಸ ಮಾಡಿಕೊಂಡಿದ್ದ ಇವರು ಇತ್ತೀಚೆಗೆ ಹೊಟ್ಟೆನೋವಿನಿಂದ ಬಳಲುತ್ತಿದ್ದು ಮಾನಸಿಕವಾಗಿ ನೊಂದು ಅ.12ರಂದು ಆಜನ ಎಂಬಲ್ಲಿರುವ ತೋಟದಲ್ಲಿ ಸಂಜೆ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿದ್ದರು.


ಮನೆ ಮಂದಿ ಕಡಬ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿದ್ದರು. ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಚೇತರಿಸಿಕೊಂಡ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿಸಿ ಮನೆಗೆ ಕರೆದುಕೊಂಡು ಬರುತ್ತಿರುವಾಗ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ಮೃತರ ಪುತ್ರ ನಾಗರಾಜ ಎಮ್ ಎಂಬವರು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here