ನರೇಂದ್ರ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ‍್ಯನಿರ್ವಹಣಾಧಿಕಾರಿ ಭಾಸ್ಕರ್ ರವರಿಗೆ ಶ್ರದ್ಧಾಂಜಲಿ

0

ಪುತ್ತೂರು: ಸುಮಾರು 27 ವರ್ಷಗಳಿಂದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಕಾರ‍್ಯನಿರ್ವಹಣಾಧಿಕಾರಿಯಾಗಿ ಕಾರ‍್ಯನಿರ್ವಹಿಸುತ್ತಿದ್ದ ಭಾಸ್ಕರ್ ಬಿ. ಇವರು ಅಕ್ಟೋಬರ್ 18ರಂದು ದೈವಾಧೀನರಾಗಿರುತ್ತಾರೆ.ಆ ಕುರಿತು ಸಂತಾಪ ಸೂಚಕ ಸಭೆ ನಡೆಸಿ ಶ್ರದ್ಧಾಂಜಲಿ ಅರ್ಪಣಾ ಕಾರ್ಯ ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ರವರು ಮಾತನಾಡಿ, ನಮ್ಮ ಸಂಸ್ಥೆಗಳಿಗೆ ಭಾಸ್ಕರ್ ಅವರ ಕೊಡುಗೆ ಸ್ಮರಣೀಯ. ಅವರ ಸರಳತೆ, ಉನ್ನತ ಆದರ್ಶಗಳು, ಪರೋಪಕಾರಿ ಉತ್ಸಾಹ, ಸೇವಾ ಕಾಳಜಿ, ಉದ್ಯಮಶೀಲ ಚಾಣಾಕ್ಷತೆ ನಮ್ಮ ಸಂಸ್ಥೆಗಳಿಗೆ ಮಾರ್ಗದರ್ಶಿ ಚೇತನವಾಗಿ ಮತ್ತು ಯುವ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಿ ಮುಂದುವರಿಯುತ್ತದೆ ಎಂದು ಹೇಳಿದರು.


ಈ ಕಾರ‍್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ, ಸಂಚಾಲಕರಾದ ಸಂತೋಷ ಬಿ. ಉಪಸ್ಥಿತರಿದ್ದರು.


ಕಾಲೇಜಿನ ಪ್ರಾಂಶುಪಾಲರು,ಉಪನ್ಯಾಸಕರು,ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು, ಭಾಸ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.ಅಗಲಿದ ಆತ್ಮಕ್ಕೆ ಗೌರವ ಸೂಚಕವಾಗಿ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಸಲ್ಲಿಸಿದರು.

LEAVE A REPLY

Please enter your comment!
Please enter your name here