ವಿದ್ಯಾಭಾರತಿ ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

0

ಪುತ್ತೂರು: ಗೀತಾ ವಿದ್ಯಾಮಂದಿರ ಗೋಹನ, ಸೋನಿಪತ್‌ ಪ್ರದೇಶ ಹರಿಯಾಣ ಇಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ  ಖೋ-ಖೋ ಪಂದ್ಯಾಟದಲ್ಲಿ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ  ತರುಣವರ್ಗ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.

ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ  ಜಿಷ್ಣು ಪ್ರಕಾಶ್‌.ಎ, ಬಿ.ಗುರುಕಿರಣ್‌ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ವನಿಶ್‌, ಚಿಂತನ್‌.ಪಿ, ಭವಿಷ್‌.ಜಿ, ಸೃಜನ್‌, ತರುಣ್‌.ಬಿ.ಎಸ್, ಮಿಥುನ್‌ ಶೆಟ್ಟಿ ಎಸ್‌ ಎಲ್, ತೇಜಸ್‌.ಪಿ.ಕೆ, ಮನ್ವಿತ್‌‌ ಬಿ. ಎಲ್, ಗೌತಮ್‌‌ ವಿ.ಅಂಚನ್, ಪ್ರೇಕ್ಷಿತ್‌‌ ಶೆಟ್ಟಿ ಎಮ್ ಭಾಗವಹಿಸಿದ್ದರು. ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here