ಜ್ಞಾನ – ವಿಜ್ಞಾನ ಮೇಳ : ನರಿಮೊಗರು ಸಾಂದೀಪನಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಅಜಿತೇಶ್ .ಜೆ.ಎನ್. ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ನರಿಮೊಗರು :ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ದ. ಕ ಜಿಲ್ಲೆ  ಹಾಗೂ ಶಾರದಾ ಸಮೂಹ ವಿದ್ಯಾ ಸಂಸ್ಥೆಗಳು ಇದರ ಜಂಟಿ ಆಶ್ರಯದಲ್ಲಿ ಪ್ರಾಂತ ಮತ್ತು ಕ್ಷೇತ್ರ ಮಟ್ಟದ ಜ್ಞಾನ – ವಿಜ್ಞಾನ ಮೇಳ 2024-25 ಇದರಲ್ಲಿ ನಡೆದ ಕ್ಲೇ ಮಾಡೆಲಿಂಗ್ ನಲ್ಲಿ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಮಾ l ಅಜಿತೇಶ್ ಜೆ .ಎನ್ ಇವರು ಕ್ಲೇ ಮಾಡೆಲಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದು ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 

ಚಿತ್ರಕಲಾ ಶಿಕ್ಷಕರಾದ  ಸುಚೇತ್ ರವರು ತರಬೇತಿಯನ್ನು ನೀಡಿದ್ದು, ಶಾಲಾ ಸಂಚಾಲಕರಾದ  ಭಾಸ್ಕರ್ ಆಚಾರ್ ಹಿಂದಾರು ಹಾಗೂ ಶಾಲಾ ಮುಖ್ಯಶಿಕ್ಷಕಿ   ಜಯಮಾಲಾ ವಿ. ಎನ್. ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಮಾ l ಅಜಿತೇಶ್ ಜೆ ಎನ್ ಇವರು ದಿ. ಜತ್ತಪ್ಪ ಗೌಡ ಹಾಗೂ ಶೀಮತಿ ಬೇಬಿ ರೇಖಾ ನೈತಾಡಿ ಅವರ ಪುತ್ರ.

LEAVE A REPLY

Please enter your comment!
Please enter your name here