
ಪುತ್ತೂರು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಸಂಕಲ್ಪ ಮಾಡಿಕೊಂಡಂತೆ ನ.14ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಏಕಾದಶ ರುದ್ರ ಸೇವೆ ಮಾಡಿದರು.
ಬೆಳಿಗ್ಗೆ ಸಂಕಲ್ಪ ಕಾರ್ಯದಲ್ಲಿ ಭಾಗವಹಿಸಿದ ಅವರು ಮಧ್ಯಾಹ್ನ ಶ್ರೀ ಸತ್ಯ ಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಪ್ರಸಾದ ಸ್ವೀಕರಿಸಿದರು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭ ಬಿಜೆಪಿ ಮಂಡಲದ ಉಪಾಧ್ಯಕ್ಷ ಸಂತೋಷ್ ರೈ ಕೈಕಾರ, ಹಿಂಜಾವೆಯ ದಿನೇಶ್ ಪಂಜಿಗ ಉಪಸ್ಥಿತರಿದ್ದರು.