ಪಡುಮಲೆ ಸಾಮೂಹಿಕ ಕಾರ್ತಿಕ ಪೂಜೆ ದೀಪೋತ್ಸವ

0

ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಶ್ರೀ ದೇವರಿಗೆ ಸಾಮೂಹಿಕ ಕಾರ್ತಿಕ ಪೂಜೆ ಹಾಗೂ ಕಾರ್ತಿಕ  ದೀಪೋತ್ಸವ ಕಾರ್ಯಕ್ರಮವು ನ.30 ರಂದು ನಡೆಯಿತು. 

ಪ್ರಾರಂಭದಲ್ಲಿ  ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ನೇತೃತ್ವದಲ್ಲಿ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ನಡೆದು ಬಳಿಕ  ಮಹಾ ಗಣಪತಿ ದೇವರಿಗೆ ಮತ್ತು ಶ್ರೀ ಶಾಸ್ತಾರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ತದನಂತರ  ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಚಂದುಕೂಡ್ಲು ದೀಪೋತ್ಸವಕ್ಕೆ ಚಾಲನೆ ನೀಡಿದರು. 

ಬಳಿಕ ಭಕ್ತಾಧಿಗಳಿಂದ  ಹಣತೆ ಹಚ್ಚಿ ಸಂಭ್ರಮಿಸಲಾಯಿತು. ಶ್ರೀ ದೇವರಿಗೆ ಸಾಮೂಹಿಕ ಕಾರ್ತಿಕ ಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವಿವಿಧ ಸಮಿತಿ ಅಧ್ಯಕ್ಷರುಗಳು, ಹಾಗೂ ಸದಸ್ಯರುಗಳು  ಮತ್ತು  ಊರ ಭಕ್ತಾದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here