ಪ್ರತಿಭಾ ಕಾರಂಜಿ: ರಾಮಕುಂಜ ಆ.ಮಾ.ಶಾಲೆಯ ಇಬ್ಬರು ರಾಜ್ಯಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಇಲ್ಲಿನ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬೆಳ್ತಂಗಡಿಯ ಹೋಲಿ ರಿಡಿಮರ್ ಶಾಲೆಯಲ್ಲಿ ಡಿ.6ರಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು.


ಪ್ರೌಢಶಾಲಾ ವಿಭಾಗದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರಜ್ಞಾ ತುಳು ಭಾಷಣ ಸ್ಪಧೆ೯ಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಪೆರಾಬೆ ಗ್ರಾಮದ ಕುಪ್ಲಾಜೆ ಚಿದಾನಂದ ಭಂಡಾರಿ ಹಾಗೂ ಎಂ.ಆಶಾಲತಾ ಭಂಡಾರಿ ದಂಪತಿಯ ಪುತ್ರಿ. ಪ್ರಾಥಮಿಕ ವಿಭಾಗದ ತುಳು ಕಂಠಪಾಠ ಸ್ಪರ್ಧೆಯಲ್ಲಿ 7ನೇ ತರಗತಿಯ ಛಾಯಾ ಸ್ವರೂಪ್ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈತ ಕೊಯಿಲ ಗ್ರಾಮದ ಎರ್ಮಡ್ಕ ಗಣೇಶ ಹಾಗೂ ರೇಷ್ಮಾ ದಂಪತಿಯ ಪುತ್ರ. ಹಿಂದಿ ಭಾಷಣದಲ್ಲಿ 9ನೇ ತರಗತಿಯ ಶರಣ್ಯ ಶೆಟ್ಟಿ ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಆಡಳಿತಾಧಿಕಾರಿ ಆನಂದ ಎಸ್.ಟಿ., ವ್ಯವಸ್ಥಾಪಕ ರಮೇಶ್ ರೈ ಆರ್.ಬಿ., ಪ್ರೌಢಶಾಲಾ ಮುಖ್ಯಗುರು ಗಾಯತ್ರಿ ಯು ಎನ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಗುರು ಲೋಹಿತಾ ಎ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಶುಭ ಹಾರೈಸಿದರು.

LEAVE A REPLY

Please enter your comment!
Please enter your name here