ಇಂದಿನಿಂದ ಸರ್ವೆ ಜಾತ್ರೆ

0

ಪುತ್ತೂರು: ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರೋತ್ಸವವು ಡಿ.24ರಿಂದ ಡಿ.28ರ ವರೆಗೆ ನಡೆಯಲಿದೆ.


ಡಿ.24ರಂದು ಹೊರೆ ಕಾಣಿಕೆ ನಡೆಯಲಿದ್ದು, ಸಂಜೆ ಗಂಟೆ 5ರಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ‘ಸಂಪೂರ್ಣ ಶ್ರೀ ದೇವಿ ಮಹಾತ್ಮೆ’ ನಡೆಯಲಿದೆ.


ಡಿ.25ರಂದು ಸಂಜೆ ಭಜನಾ ಮಂಗಳೋತ್ಸವ, ಹಿರಿಯ ಭಜಕರಿಗೆ ಗೌರವಾರ್ಪಣೆ, ಭಜಕರಿಗೆ ಹಾಗೂ ಬೈಲುವಾರು ಸಂಚಾಲಕರಿಗೆ ಗೌರವಾರ್ಪಣೆ, ಭಜನಾ ಸಂಕೀರ್ತನೆ ಹಾಗೂ ಊರ ಪ್ರತಿಭೆಗಳಿಂದ ಸಾಂಸ್ಕೃತಿಕ ವೈಭವ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ.


ಡಿ.26ರಂದು ಬೆಳಿಗ್ಗೆ ಗಂಟೆ 8.30ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ಗಣಪತಿಹೋಮ, ಕಲಶಪೂಜೆ, ಕಲಶಾಭಿಷೇಕ ನಡೆಯಲಿದ್ದು ಮದ್ಯಾಹ್ಯ ಗಂಟೆ 12ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ.ಸಂಜೆ ಗಂಟೆ 6.30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ರಾತ್ರಿ ಗಂಟೆ 8.00ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ಕಟ್ಟೆಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ.


ಡಿ.27ರಂದು ಬೆಳಿಗ್ಗೆ ಗಂಟೆ 9-೦೦ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ಕಟ್ಟೆಪೂಜೆ, ದರ್ಶನ ಬಲಿ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 6-೦೦ರಿಂದ ದೈವಗಳ ಭಂಡಾರ ತೆಗೆಯುವುದು, 6-30ಕ್ಕೆ ಸಭಾ ಕಾರ್ಯಕ್ರಮ, ರಾತ್ರಿ ಗಂಟೆ 7-30ಕ್ಕೆ ರಂಗಪೂಜೆ ಮಂತ್ರಾಕ್ಷತೆ, ರಾತ್ರಿ ಗಂಟೆ 8-30ಕ್ಕೆ ನೇಮೋತ್ಸವ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ.

ಡಿ.28ರಂದು ಬೆಳಿಗ್ಗೆ ಸಂಪ್ರೋಕ್ಷಣೆ, ಕಲಶಾಭಿಷೇಕ, ಮದ್ಯಾಹ್ನ ಗಂಟೆ 12-೦೦ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಶಿವನಾಥ ರೈ ಮೇಗಿನಗುತ್ತು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here