ಪುತ್ತೂರು: ಅನಾರೋಗ್ಯದಲ್ಲಿರುವ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಉದಯಗಿರಿ ಹಾಗೂ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಮಾಜಿ ಸದಸ್ಯರ ಕುಟುಂಬಕ್ಕೆ ಭಜನಾ ಮಂಡಳಿಯಿಂದ ಸಂಗ್ರಹಿಸಿದ ಮೊತ್ತವನ್ನು ಆರ್ಥಿಕ ನೆರವಿನ ರೂಪದಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಮೂಲಕ ಹಸ್ತಾಂತರಿಸಲಾಯಿತು.
ಆರ್ಥಿಕನೆರವನ್ನು ನವೀನ್ ಉದಯಗಿರಿ ಅವರ ಪತ್ನಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.