ಪುತ್ತೂರು: ಆರ್ಯಾಪು ಗ್ರಾಮದ ಮಿನಿಪದವು ಎಂಬಲ್ಲಿರುವ ಶ್ರೀ ಅಯ್ಯಪ್ಪ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮೂಲಕ 50,000 ರೂಪಾಯಿ ಅನುದಾನ ಬಂದಿದ್ದು ಇದರ ಚೆಕ್ಕನ್ನು ಪುತ್ತೂರು ತಾಲೂಕು ಯೋಜನಾಧಿಕಾರಿ ಶಶಿಧರ್ ಎಂ ರವರು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸೀತಾರಾಮ ರೈ ಕೈಕಾರ ಹಾಗೂ ಕಾರ್ಯದರ್ಶಿ ಪ್ರಜ್ವಲ್ ರೈ ತೊಟ್ಲ ರವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಯೋಜನೆಯ ಕುಂಬ್ರ ವಲಯಾಧ್ಯಕ್ಷ ಎಸ್ ಮಾಧವ ರೈ ಕುಂಬ್ರ, ರಾಜೇಶ್ ರೈ ಪರ್ಪುಂಜ, ಚಂದ್ರಹಾಸ ರೈ ಪನಡ್ಕ, ಹರೀಶ್ ನಾಯಕ್ ಬಳಕ್ಕ, ಅಮರನಾಥ ರೈ ಪನಡ್ಕ, ಪುರಂದರ ರೈ ನಾಯಿಲ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕರಾದ ಮೋಹಿನಿ ಸ್ವಾಗತಿಸಿ, ಸೇವಾಪ್ರತಿನಿಧಿ ಪವಿತ್ರ ವಂದಿಸಿದರು.