ಮಂಗಳೂರು: ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ ನ 2025-26ನೇ ಸಾಲಿನ ನಿಯೋಜಿತ ಅಧ್ಯಕ್ಷರಾಗಿ ಮಂಗಳೂರಿನ ಡಾ.ಬಿ. ಸಚ್ಚಿದಾನಂದ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಫೆ.2 ರಂದು ನಡೆದ ಅಸೋಸಿಯೇಷನ್ ನ 49ನೇ ವಾರ್ಷಿಕ ಸಮಾವೇಶದಲ್ಲಿ ಈ ಆಯ್ಕೆ ನಡೆಯಿತು.
ಡಾ.ಸಚ್ಚಿದಾನಂದ ರೈ ಅವರು ಕೆನರಾ ಆರ್ಥೋಪೆಡಿಕ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ನ ಮಂಗಳೂರು ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಆಡಳಿತ ಮಂಡಳಿ ನಿರ್ದೇಶಕರಾಗಿದ್ದಾರೆ. ಡಾ.ಬಿ.ಸಚ್ಚಿದಾನಂದ ರೈ ಅವರು ಮೂಲತಃ ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಬೂಡಿಯಾರ್ ಮನೆಯವರು.