ಪುತ್ತೂರು: ಪುತ್ತೂರಿನಲ್ಲಿ ಕೇಂದ್ರ ಕಛೇರಿಯನ್ನು ಹೊಂದಿ ರಾಜ್ಯಾದ್ಯಂತ 19 ಶಾಖೆಗಳೊಂದಿಗೆ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 20ನೇ ಶಾಖೆಯು ಫೆ.7 ರಂದು ಚೈತನ್ಯ ವ್ಯವಹಾರ ಸಂಕೀರ್ಣ ಮೊದಲನೇ ಮಹಡಿ ಮುಖ್ಯ ರಸ್ತೆ ಕಲ್ಲಡ್ಕದಲ್ಲಿ ಶುಭಾರಂಭಗೊಳ್ಳಲಿದೆ.
ನೂತನ ಶಾಖೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್, ಮಾಜಿ ಶಾಸಕ ರುಕ್ಮಯ ಪೂಜಾರಿ, ಮಾಜಿ ಶಾಸಕ ಮತ್ತು ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ನಿ. ಇದರ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ, ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮ, ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ ನಿ. ಬೆಂಗಳೂರು ಇದರ ನಿರ್ದೇಶಕಿ ಭಾರತಿ ಜಿ ಭಟ್, ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ ಕಾಲೇಜು ಬಂಟ್ವಾಳ ಇಲ್ಲಿನ ನಿವೃತ್ತ ಪ್ರಾಂಶುಪಾಲ ಪಾಂಡುರಂಗ ನಾಯಕ್, ಉದ್ಯಮಿ ವರದರಾಯ ಪ್ರಭು, ಚೈತನ್ಯ ವ್ಯವಹಾರ ಸಂಕೀರ್ಣದ ಮಾಲಕ ತಿರುಮಲೇಶ್ವರ ಭಟ್ ಇವರು ಭಾಗವಹಿಸಲಿದ್ದಾರೆ.
ಸಹಕಾರಿ ಸಂಘದಲ್ಲಿ ಆಕರ್ಷಕ ಬಡ್ಡಿದರದಲ್ಲಿ ಠೇವಣಿ ಸ್ವೀಕಾರ, ವಿವಿಧ ಉದ್ದೇಶದ ಸಾಲಗಳು, ಜೀವವಿಮೆ ಹಾಗೂ ಸಾಮಾನ್ಯ ವಿಮೆಗಳು, ಪಾನ್ ಕಾರ್ಡ್, ಮುಂತಾದ ಸೌಲಭ್ಯವನ್ನು ಸದಸ್ಯರಿಗೆ ನೀಡಲಾಗುತ್ತಿದೆ. ಸಹಕಾರಿ ಸಂಘವು ಆರಂಭದಿಂದಲೂ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದ್ದು ದಿನಾಂಕ 31-01-2025ರಂತೆ 48734 ಸದಸ್ಯರನ್ನು ಹೊಂದಿದ್ದು ರೂ. 349.57 ಕೋಟಿ ಠೇವಣಾತಿಯನ್ನು ಸಂಗ್ರಹಿಸಿ ರೂ. 328.78 ಕೋಟಿ ಸಾಲ ವಿತರಿಸಿ ರೂ 678.35ಕೋಟಿ ವ್ಯವಹಾರವನ್ನು ದಾಖಲಿಸಿದೆ. ಕಳೆದ ಮಾರ್ಚ್ ವರ್ಷಾಂತ್ಯಕ್ಕೆ ರೂ.5.19ಕೋಟಿ ನಿವ್ವಳ ಲಾಭ ಗಳಿಸಿದ್ದು, ಶೇ 12% ಡಿವಿಡೆಂಡನ್ನು ವಿತರಿಸಲಾಗಿದೆ. ಸಹಕಾರಿಯು ಕೇವಲ ಆರ್ಥಿಕ ಕ್ಷೇತ್ರದಲ್ಲಿ ಮಾತ್ರವಲ್ಲದೆ ಸಾಮಾಜಿಕ ಸೇವಾ ಕಾರ್ಯದ ಭಾಗವಾಗಿ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ನ್ನು ಸ್ಥಾಪಿಸಿ ಇದರ ಮೂಲಕ ಆಶಕ್ತರಿಗೆ ಆರ್ಥಿಕ ನೆರವು, ವಿವಿಧ ಪುಸ್ತಕಗಳ ಬಿಡುಗಡೆ, ಮಹಿಳೆಯರಿಗೆ ಟೈಲರಿಂಗ್ ತರಬೇತಿ ಆರೋಗ್ಯ ಮಾಹಿತಿ ಶಿಬಿರ, ಶಾಲಾ ಕಾಲೇಜುಗಳಿಗೆ ವಿವಿಧ ಗ್ರಾಹಕರು ಕಲ್ಲಡ್ಕದಲ್ಲಿ ಆರಂಭಗೊಳ್ಳಲಿರುವ ನೂತನ ಶಾಖೆಯ ಶುಭಾರಂಭದ ಪ್ರಯುಕ್ತ 1ವರ್ಷ ಅವಧಿಯ ನಿರಖು ಠೇವಣಿಗೆ ಶೇ.0.15% ಹೆಚ್ಚುವರಿ ಬಡ್ಡಿ ನೀಡಲಾಗುವುದು ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.