ಫೆ.7: ಬುಡೇರಿಯಾ ಶ್ರೀದೇವಿ ಉಳ್ಳಾಲ್ತಿ ಉಳ್ಳಾಕ್ಲು ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕ ದಿನಾಚರಣೆ, ಶನೈಶ್ಚರ ಕಲ್ಪೋಕ್ತ ಪೂಜೆ, ಆಶ್ಲೇಷ ಬಲಿ, ರಂಗಪೂಜೆ

0

ಆಲಂಕಾರು: ಬುಡೇರಿಯಾ ಶ್ರೀ ದೇವಿ ಉಳ್ಳಾಲ್ತಿ ಮತ್ತು ಉಳ್ಳಾಕ್ಲು ಹಾಗೂ ಪರಿವಾರ ದೈವಗಳಿಗೆ ವಿಶೇಷ ತಂಬಿಲ, ಶನೈಶ್ಚರ ಕಲ್ಪೋಕ್ತ ಪೂಜೆ, ಆಶ್ಲೇಷ ಬಲಿ ಮತ್ತು ರಂಗ ಪೂಜೆ ಫೆ.7 ರಂದು ಬ್ರಹ್ಮಶ್ರೀ ವೇ.ಮೂ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯ ರವರ ನೇತೃತ್ವದಲ್ಲಿ ನಡೆಯಲಿದೆ.

ಬೆಳಿಗ್ಗೆ 7ರಿಂದ ಸ್ವಸ್ತಿ ಪುಣ್ಯಾಹವಾಚನ, ಗಣಪತಿ ಹೋಮ, ನವಗ್ರಹಶಾಂತಿ ಸಹಿತ ಶನಿ ಶಾಂತಿ ಹೋಮ, ಶನೈಶ್ಚರ ಕಲ್ಪೋಕ್ತ ಪೂಜೆ, ನಾಗದೇವರಿಗೆ ನವಕ ಕಲಶಾಭಿಷೇಕ, ನಾಗರಾಜ ಕಲ್ಪೋಕ್ತ ಪೂಜೆ, ದೈವಗಳಿಗೆ ಕಲಶ ಪ್ರಧಾನ ಹೋಮ, ಕಲಶಾಭಿಷೇಕ, ತಂಬಿಲ ನಡೆದು ಶನಿಶಾಂತಿಯ ಪೂರ್ಣಾಹುತಿ, ಮಹಾಮಂಗಳಾರತಿ, ಶ್ರೀದೇವಿ ಉಳ್ಳಾಲ್ತಿ ಮತ್ತು ಉಳ್ಳಾಕ್ಲು ಹಾಗೂ ಪರಿವಾರ ದೈವಗಳಿಗೆ ವಿಶೇಷ ತಂಬಿಲ, ಪ್ರಸಾದ ವಿತರಣೆ, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಮಧ್ಯಾಹ್ನ ಅನ್ನಪ್ರಸಾದ ಭೋಜನ ನಡೆಯಲಿದೆ.

ಸಂಜೆ ರಂಗಪೂಜೆ ಸಂಕಲ್ಪ, ಆಶ್ಲೇಷ ಬಲಿ, ಶ್ರೀದೇವಿ ಉಳ್ಳಾಲ್ತಿ ಮತ್ತು ಉಳ್ಳಾಕ್ಲು ದೈವಗಳಿಗೆ ರಂಗಪೂಜೆ ನಡೆದು ಅನ್ನಪ್ರಸಾದ ಭೋಜನ ನಡೆಯಲಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿ ದೈವ, ದೇವರುಗಳ ಕೃಪೆಗೆ ಪಾತ್ರರಾಗುವಂತೆ ಊರವರ ಪರವಾಗಿ ಅಡಳಿತ ಪ್ರಮುಖರಾದ ಈಶ್ವರ ಗೌಡ ಪಜ್ಜಡ್ಕ, ಸಂಕಪ್ಪ ಗೌಡ ಗೌಡತ್ತಿಗೆ, ಸೂರಪ್ಪ ಪೂಜಾರಿ ಹೊಸಮಜಲು, ಅರ್ಚಕರಾದ ಅನಂತರಾಮ ಭಟ್ ತೋಟಂತಿಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here