




ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ರಾಜೇಶ್ ಬನ್ನೂರು ಅವರಿದ್ದ ಮನೆಯನ್ನು ಫೆ .4 ರ ತಡ ರಾತ್ರಿ ಧ್ವಂಸಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಪ್ರಮುಖರು ಮತ್ತು ಕಾರ್ಯಕರ್ತರು ಪುತ್ತೂರು ಪೊಲೀಸ್ ಠಾಣೆ ಎದುರು ಜಮಾಯಿಸಿದ್ದಾರೆ.ಮನೆ ಧ್ವಂಸಗೊಳಿಸಿದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ.












