ವಿದ್ಯಾರಶ್ಮಿ ಕಾಲೇಜು ವತಿಯಿಂದ ಸಹಕಾರ ರತ್ನ ಸವಣೂರು ಕೆ. ಸೀತಾರಾಮ ರೈ ಯವರಿಗೆ ಸನ್ಮಾನ

0

ಪುತ್ತೂರು: ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸಹಕಾರ ರತ್ನ ಸವಣೂರು ಕೆ. ಸೀತಾರಾಮ ರೈ ಯವರು ಸತತ 30 ವರ್ಷಗಳಿಂದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ.ಲಿ. ಮಂಗಳೂರು ಇದರ ನಿರ್ದೇಶಕರಾಗಿದ್ದು ಈ ಬಾರಿಯ ಚುನಾವಣೆಯಲ್ಲೂ ಮಗದೊಮ್ಮೆ 5 ವರ್ಷಗಳ ಅವಧಿಗೆ ನಿರ್ದೇಶಕರಾಗಿ ಆಯ್ಕೆಗೊಂಡಿರುತ್ತಾರೆ.

ಇವರನ್ನು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಸಂಸ್ಥೆಯ ಆಡಳಿತಾಧಿಕಾರಿಗಳಾದ ನ್ಯಾಯವಾದಿಗಳು ಅಶ್ವಿನ್.ಎಲ್ ಶೆಟ್ಟಿ , ಟ್ರಸ್ಟಿಗಳಾದ ರಶ್ಮಿ ಅಶ್ವಿನ್ ಶೆಟ್ಟಿ, ಪ್ರಾಂಶುಪಾಲರಾದ ಡಾ. ರಾಜಲಕ್ಷ್ಮೀ ಎಸ್ ರೈ, ಉಪಪ್ರಾಂಶುಪಾಲ ಶೇಷಗಿರಿ ಎಂ. ಹಾಗೂ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಸನ್ಮಾನಿಸಿದರು.

LEAVE A REPLY

Please enter your comment!
Please enter your name here