![](https://puttur.suddinews.com/wp-content/uploads/2025/02/download-17.jpg)
ಪುತ್ತೂರು: ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ (ರಿ.) ಮುಕ್ರಂಪಾಡಿ ಇದರ ವತಿಯಿಂದ ನಡೆಯುವ 53 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ಫೆ. 8 ರಂದು ವೇದಮೂರ್ತಿ ಉದಯನಾರಾಯಣ ಕಲ್ಲೂರಾಯ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಮುಕ್ರಂಪಾಡಿ ಸುಭದ್ರ ಸಭಾಭವನದ ಬಳಿಯ ಅಶ್ವತ್ಥ ಕಟ್ಟೆಯಲ್ಲಿ ನಡೆಯಲಿದೆ.
ಬೆಳಿಗ್ಗೆ 7 ರಿಂದ ಗಣಹೋಮ, ಅಶ್ವತ್ಥ ನಾರಾಯಣ ಪೂಜೆ, ಸಂಜೆ 6 ರಿಂದ ದೇವತಾ ಪ್ರಾರ್ಥನೆ , ಸುಭಧ್ರ ಮಹಿಳಾ ಭಜನಾ ಮಂಡಳಿ ಮುಕ್ರಂಪಾಡಿ ಇವರಿಂದ ಭಜನಾ ಕಾರ್ಯಕ್ರಮ, ಸತ್ಯನಾರಾಯಣ ಪೂಜೆ, ಅನ್ನಸಂತರ್ಪಣೆ. ರಾತ್ರಿ 9.30 ರಿಂದ ಬಳಿಕ ದಯಾನಂದ ಕತ್ತಲ್ಸಾರ್ ಇವರ ಸಾರಥ್ಯದಲ್ಲಿ ಕ್ಷೇತ್ರ ಪುರಾಣ ಮಂಜರಿ -ಭಕ್ತಿ ಭಾವದ ನೃತ್ಯ ಸಂಗಮ ನಡೆಯಲಿದೆ. ಈ ಎಲ್ಲಾ ಧಾರ್ಮಿಕ,ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ಭಕ್ತರು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿ ಪೂಜಾ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.