ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್ ಪಾಣಾಜೆ ಆಯ್ಕೆ

0

ಪುತ್ತೂರು: ಯುವ ಕಾಂಗ್ರೆಸ್ ರಾಜ್ಯ ಘಟಕಕ್ಕೆ ನಡೆದ ಆಂತರಿಕ ಚುನಾವಣೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವಕ್ತಾರ ಶ್ರೀಪ್ರಸಾದ್ ಪಾಣಾಜೆ ಆಯ್ಕೆಯಾಗಿದ್ದಾರೆ.

ಇವರು 5820 ಮತಗಳನ್ನು ಪಡೆದುಕೊಂಡಿದ್ದಾರೆ. ಪಾಣಾಜೆಯ ನಡುಗಟ್ಟಿ ನಿವಾಸಿಯಾಗಿರುವ ಇವರು ಖಾಸಗಿ ಶಾಲೆಯಲ್ಲಿ 8 ವರ್ಷಗಳ ಕಾಲ ಶಿಕ್ಷಕ ವೃತ್ತಿ ಮಾಡಿದ್ದರು. ಬಳಿಕ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರು.

ಶ್ರೀಪ್ರಸಾದ್ ಅವರು ಪಾಣಾಜೆ ಲಯನ್ಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ, ವಿದ್ಯಾಶ್ರೀ ಚಾರಿಟೇಬಲ್ ಟ್ರಸ್ಟ್ ಸಂಚಾಲಕರಾಗಿ, ಯಾದವ ಸಭಾ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದೆಹಲಿಯಲ್ಲಿ ನಡೆದ ಯಂಗ್ ಇಂಡಿಯಾ ಕ ಬೊಲೊ ಕಾರ್ಯಕ್ರಮದಲ್ಲಿ ತನ್ನ ಭಾಷಣದ ಮೂಲಕ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಮನಗೆದ್ದಿದ್ದರು.

LEAVE A REPLY

Please enter your comment!
Please enter your name here