ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಿರಿಯ ಕನ್ನಡ ನಟಿ ಸುಧಾರಾಣಿ ಅವರು ಭೇಟಿ ನೀಡಿದರು.
ದೇವಳದ ಸತ್ಯಧರ್ಮ ನಡೆಯಲ್ಲಿ ಸುಧಾರಾಣಿ ಅವರಿಗೆ ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಪ್ರಸಾದ ವಿತರಿಸಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ವಿನಯ ಸುವರ್ಣ ಅವರು ಶಲ್ಯ ನೀಡಿ ಗೌರವಿಸಿದರು.