ನರೇಂದ್ರ ಪ.ಪೂ.ಕಾಲೇಜಿನಲ್ಲಿ ದೀಪ ಪ್ರದಾನ ಕಾರ‍್ಯಕ್ರಮ

0

ಪುತ್ತೂರು:ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳ ಪರಿಶ್ರಮವೇ ಅವರ ಮುಂದಿನ ಗುರಿಗೆ ಉತ್ತಮ ಮಾರ್ಗ ಕಲ್ಪಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಯಶಸ್ಸು ಪಡೆಯಲು ಮುನ್ನಡೆಯಬೇಕಿದೆ. ಸಾಧನೆಯ ಯಶಸ್ಸು ಪಡೆಯಲು ಮಾರ್ಗ ಸರಳವಾಗಿಲ್ಲ, ಆದರೆ ಸತತ ಪರಿಶ್ರಮದಿಂದ ಯಶಸ್ಸಿನ ಹಾದಿಯತ್ತ ಸಾಗಲು ಸಾಧ್ಯ. ಜ್ಞಾನ ಶಕ್ತಿ, ಇಚ್ಛಾಶಕ್ತಿ, ಕ್ರಿಯಾ ಶಕ್ತಿಯೆಂಬ ಅಂಶ ಅಳವಡಿಸಿಕೊಂಡರೆ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಜೀವನವನ್ನು ಉತ್ತಮವಾಗಿ ಮಾಡಲು ಸಾಧ್ಯ. ಜೊತೆಗೆ ವಿದ್ಯಾರ್ಥಿಗಳು ಸಿಕ್ಕ ಅವಕಾಶದಲ್ಲಿ ಅದರ ಸದುಪಯೋಗ ಪಡೆದುಕೊಳ್ಳಲು ಯತ್ನಿಸಬೇಕು.ವಿದ್ಯಾರ್ಥಿಗಳಲ್ಲಿನ ಕಿಚ್ಚು ಯಾವತ್ತು ಸಕ್ರಿಯವಾಗಿದ್ದರೆ ಗುರಿ ಸಾಧನೆಗೆ ಸಹಕಾರಿಯಾಗಲಿದೆ. ಎಂದು ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಇದರ ಪ್ರಾಂಶುಪಾಲರಾದ ಡಾ. ಗುರುರಾಜ ಎಮ್. ಪಿ. ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ದೀಪ ಪ್ರದಾನ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಉಮೇಶ್ ನಾಯಕ್ ರವರು ಮಾತನಾಡಿ, ಬದುಕಿಗೊಂದು ದಿಕ್ಕು ಮತ್ತು ಆ ದಿಕ್ಕಿನಲ್ಲಿ ಸಾಗಬೇಕಾದ ದಾರಿಯ ಅರಿವನ್ನು ಇಂದಿನ ಯುವಪೀಳಿಗೆಯಲ್ಲಿ ಮೂಡಿಸುವ ಕೆಲಸವನ್ನು ನಮ್ಮ ಸಂಸ್ಥೆಗಳು ಮಾಡುತ್ತಿದೆ.ಅದಕ್ಕೆ ಪೂರಕವಾದ ಎಲ್ಲಾ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಜೀವನದಲಿ ಅಳವಡಿಸಿ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಮಾತನಾಡಿ ,ಸಮಾಜದಲ್ಲಿ ಬದುಕುವ ಕಲೆಯನ್ನು ಕರಗತ ಮಾಡಿಕೊಳ್ಳಿ. ದಿನನಿತ್ಯ ಅಧ್ಯಯನ ಮತ್ತು ಚಿಂತನೆಯೊಂದಿಗೆ, ಭವಿ?ದಲ್ಲಿ ಬರುವ ಸವಾಲನ್ನು ಎದುರಿಸಲು ಧೈರ್ಯದಿಂದ ಸಾಗಬೇಕು. ವಿದ್ಯಾರ್ಥಿಗಳ ಸಾಧನೆಗೆ ಶ್ರಮ, ತಾಳ್ಮೆ, ಶ್ರದ್ಧೆ ಎಂಬ ನಿರ್ದಿಷ್ಟ ಮಾರ್ಗವಿದ್ದು , ಸಾಧಿಸುತ್ತೇನೆ ಎಂಬ ದೃಢ, ಅಚಲವಾದ ನಿರ್ಧಾರ ತಳೆದಾಗ ಮಾತ್ರ ಯಶಸ್ಸು ಸಾಧ್ಯವಾಗಲಿದೆ.ಎಂದು ಹೇಳಿದರು.

ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ದೀಪಾ ನಾಯಕ್ ಮಾತನಾಡಿ, ಇಂದಿನ ಯುವ ಜನತೆ ಜೀವನದಲ್ಲಿ ಸ್ಪಷ್ಟ ಗುರಿಯೆಡೆಗೆ ಶಿಸ್ತಿನಿಂದ ಸಾಗಿದರೆ ಉತ್ತುಂಗ ಸ್ಥಾನಕ್ಕೆ ಏರಬಹುದು. ಜೊತೆಗೆ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ರೂಪುಗೊಳ್ಳಬಹುದು. ಸತತ ಪ್ರಯತ್ನ , ಸಮಯ ಪಾಲನೆ ಮತ್ತು ಪ್ರಾಮಾಣಿಕತೆಯನ್ನು ರೂಢಿಸಿಕೊಳ್ಳುವುದರ ಮೂಲಕ ಯಶಸ್ಸಿನ ಕಡೆಗೆ ಸಾಗಬಹುದು.ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಉತ್ತಮಜೀವನ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಜೀವನದಲ್ಲಿ ನೆಮ್ಮದಿಯನ್ನು ಪಡೆಯಲು ಸಾಧ್ಯವಿದೆ. ಎಂದು ಹೇಳಿದರು.

ಉಪನ್ಯಾಸಕರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ , ಅವರ ಮುಂದಿನ ಭವಿಷ್ಯ ಬೆಳಗಲಿ ಎನ್ನುದರ ಸಂಕೇತವಾಗಿ ದೀಪವನ್ನು ಉರಿಸಿ ವಿದ್ಯಾರ್ಥಿಗಳಿಗೆ ಹಂಚಿದರು. ಆ ವಿದ್ಯಾರ್ಥಿಗಳು ದೀಪಗಳಿಂದ ಅಖಂಡ ಭಾರತವನ್ನು ಬೆಳಗಿದರು.

ವಿದ್ಯೆಯೊಂದಿಗೆ ಸಮಗ್ರ ಚಟುವಟಿಕೆಗಳು ಸದಾಕಾಲವೂ ವಿದ್ಯಾಸಂಸ್ಥೆಯನ್ನು ಬೆಳಗುತ್ತಿರಲಿ ಎನ್ನುವ ಸಂಕೇತವಾಗಿ ದೀಪವನ್ನು ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ಹಸ್ತಾಂತರಗೊಳಿಸಿದರು.

ಉಪನ್ಯಾಸಕರು ತಮ್ಮ ಹಿತನುಡಿಗಳ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

ಐಟಿ ಕ್ಲಬ್ ವತಿಯಿಂದ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ನಡೆಸಿದ ಡಿಜಿಟಲ್ ಕ್ಲಾಸ್- ಕಂಪ್ಯೂಟರ್ ಬೇಸಿಕ್ ಟ್ರೈನಿಂಗ್ ಪ್ರೋಗ್ರಾಮ್ ನಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕೋರ್ಸ್‌ನ ಸರ್ಟಿಫಿಕೇಟ್ ಗಳನ್ನು ನೀಡಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಕು. ಶಾಲ್ಮಲಿ ಆರ್.ಎಸ್. ಸ್ವಾಗತಿಸಿ, ಕು. ಸಿಂಧು ಸರಳಾಯ ವಂದಿಸಿದರು. ಕಾರ‍್ಯಕ್ರಮದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಅರ್ಚನಾ ನಿರೂಪಿಸಿದರು.

LEAVE A REPLY

Please enter your comment!
Please enter your name here