ಕಾಂಚನ-ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವರ್ಷಾವಧಿ ಜಾತ್ರೆ-ಹೊರೆಕಾಣಿಕೆ ಸಮರ್ಪಣೆ

0

ನೆಲ್ಯಾಡಿ: ಬಜತ್ತೂರು ಗ್ರಾಮದ ಕಾಂಚನ-ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೆ ಫೆ.12 ಹಾಗೂ 13ರಂದು ನಡೆಯಲಿದ್ದು ಇದರ ಅಂಗವಾಗಿ ಫೆ.11ರಂದು ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು.


ಬೆಳಿಗ್ಗೆ ಕಾಂಚನ ಬಸ್‌ನಿಲ್ದಾಣದಿಂದ ಕಾಣಿಕೆ ಡಬ್ಬಿ, ಬಲಿವಾಡ ಸಹಿತ ಹೊರೆಕಾಣಿಕೆ ಮೆರವಣಿಗೆಯೂ ಹೊರಟು ದೇವಸ್ಥಾನಕ್ಕೆ ಆಗಮಿಸಿತು. ದೇವಾಲಯದಲ್ಲಿ ಉಗ್ರಾಣ ಮುಹೂರ್ತ ನಡೆಯಿತು. ಗ್ರಾಮದ ಭಕ್ತರು ಅಡಿಕೆ ಗೊನೆ, ಸೀಯಾಳ, ತೆಂಗಿನಕಾಯಿ ಸಹಿತ ವಿವಿಧ ಫಲವಸ್ತು, ತರಕಾರಿಗಳನ್ನು ತಂದು ದೇವರಿಗೆ ಸಮರ್ಪಣೆ ಮಾಡಿದರು. ದೇವಸ್ಥಾನದ ಅರ್ಚಕರೂ, ಮೊಕ್ತೇಸರರೂ ಆದ ನಾರಾಯಣ ಬಡೆಕ್ಕಿಲ್ಲಾಯ ಅವರು ಪೂಜಾ ವಿಧಿವಿಧಾನ ನೆರವೇರಿಸಿದರು.


ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಕಾಂಚನ ರೋಹಿಣಿ ಸುಬ್ಬರತ್ನಂ, ಟ್ರಸ್ಟ್‌ನ ಅಧ್ಯಕ್ಷ ಶ್ರೀಧರ ಗೌಡ ಶ್ರೀಹರಿ ನಡ್ಪ, ಉಪಾಧ್ಯಕ್ಷ ಶಿವರಾಮ ಕಾರಂತ ಉರಾಬೆ, ಕಾರ್ಯದರ್ಶಿ ಸುಧಾಕೃಷ್ಣ ಪಿ.ಎಸ್. ನೆಕ್ಕರಾಜೆ, ಜೊತೆ ಕಾರ್ಯದರ್ಶಿ ಕುಶಾಲಪ್ಪ ಗೌಡ ಬಜತ್ತೂರುಗುತ್ತು, ಕೋಶಾಧಿಕಾರಿ ಜಗದೀಶ ರಾವ್ ಮಣಿಕ್ಕಳ, ಲೆಕ್ಕಪರಿಶೋಧಕರಾದ ಶಿವಣ್ಣ ಗೌಡ ಗುರುಮನೆ ಬಿದಿರಾಡಿ, ಟ್ರಸ್ಟಿಗಳಾದ ಕೆ.ವಿ.ಕಾರಂತ ಪ್ರಸನ್ನ ನಿಲಯ ಉರಾಬೆ, ಲೋಕೇಶ ಗೌಡ ಬಜತ್ತೂರು, ದುಗ್ಗಪ್ಪ ಗೌಡ ಅಗರ್ತಿಮಾರು, ಸುಮನ ಬಡೆಕ್ಕಿಲಾಯ, ಶ್ರೀ ವಿಷ್ಣುಮೂರ್ತಿ ಭಜನಾ ಸಂಘದ ಪದಾಧಿಕಾರಿಗಳು, ಸದಸ್ಯರು, ಧನು ಪೂಜಾ ಸಮಿತಿ ಸದಸ್ಯರು, ಶ್ರೀ ವಿಷ್ಣುಮೂರ್ತಿ ಶಾಶ್ವತ ಮಹಾಸಮಿತಿ, ಶ್ರೀ ವಿಷ್ಣುಮೂರ್ತಿ ಶಾಶ್ವತ ಉಪಸಮಿತಿ ಸದಸ್ಯರು ಸೇರಿದಂತೆ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here