ನೆಲ್ಯಾಡಿ: ಗ್ರಾಮದೇವರಾದ ಬಜತ್ತೂರು ಗ್ರಾಮದ ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸದ ಅಂಗವಾಗಿ ಫೆ.12ರಂದು ಬೆಳಿಗ್ಗೆ ಗೊನೆ ಮುಹೂರ್ತ, ತೋರಣ ಮುಹೂರ್ತ ನಡೆಯಿತು.
ಬೆಳಿಗ್ಗೆ ಗೊನೆ ಮುಹೂರ್ತ ನಡೆಯಿತು. ನಂತರ ಬಜತ್ತೂರು, ಕಾಂಚನ, ಪದಕ ದೈವಗಳಿಗೆ ತಂಬಿಲ ಮತ್ತು ಬಜತ್ತೂರು ಗುತ್ತಿನ ನಾಗತಂಬಿಲ ನಡೆಯಿತು. ನಂತರ ತೊರಣ ಮುಹೂರ್ತ ನಡೆಯಿತು.
![](https://puttur.suddinews.com/wp-content/uploads/2025/02/nadpa-1.jpeg)
ದೇವಸ್ಥಾನದ ಅರ್ಚಕರೂ, ಮೊಕ್ತೇಸರರೂ ಆದ ನಾರಾಯಣ ಬಡೆಕ್ಕಿಲ್ಲಾಯ ಅವರು ವಿಧಿವಿಧಾನ ನೆರವೇರಿಸಿದರು. ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಕಾಂಚನ ರೋಹಿಣಿ ಸುಬ್ಬರತ್ನಂ, ಟ್ರಸ್ಟ್ನ ಅಧ್ಯಕ್ಷ ಶ್ರೀಧರ ಗೌಡ ಶ್ರೀಹರಿ ನಡ್ಪ, ಉಪಾಧ್ಯಕ್ಷ ಶಿವರಾಮ ಕಾರಂತ ಉರಾಬೆ, ಕಾರ್ಯದರ್ಶಿ ಸುಧಾಕೃಷ್ಣ ಪಿ.ಎಸ್. ನೆಕ್ಕರಾಜೆ, ಜೊತೆ ಕಾರ್ಯದರ್ಶಿ ಕುಶಾಲಪ್ಪ ಗೌಡ ಬಜತ್ತೂರುಗುತ್ತು, ಕೋಶಾಧಿಕಾರಿ ಜಗದೀಶ ರಾವ್ ಮಣಿಕ್ಕಳ, ಲೆಕ್ಕಪರಿಶೋಧಕರಾದ ಶಿವಣ್ಣ ಗೌಡ ಗುರುಮನೆ ಬಿದಿರಾಡಿ, ಟ್ರಸ್ಟಿಗಳಾದ ಕೆ.ವಿ.ಕಾರಂತ ಪ್ರಸನ್ನ ನಿಲಯ ಉರಾಬೆ, ಲೋಕೇಶ ಗೌಡ ಬಜತ್ತೂರು, ದುಗ್ಗಪ್ಪ ಗೌಡ ಅಗರ್ತಿಮಾರು, ಸುಮನ ಬಡೆಕ್ಕಿಲಾಯ, ಶ್ರೀ ವಿಷ್ಣುಮೂರ್ತಿ ಭಜನಾ ಸಂಘದ ಪದಾಧಿಕಾರಿಗಳು, ಸದಸ್ಯರು, ಧನು ಪೂಜಾ ಸಮಿತಿ ಸದಸ್ಯರು, ಶ್ರೀ ವಿಷ್ಣುಮೂರ್ತಿ ಶಾಶ್ವತ ಮಹಾಸಮಿತಿ, ಶ್ರೀ ವಿಷ್ಣುಮೂರ್ತಿ ಶಾಶ್ವತ ಉಪಸಮಿತಿ ಸದಸ್ಯರು ಸೇರಿದಂತೆ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.