ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅಭಿವೃದ್ದಿ ಕುರಿತು ಫೆ.16 ರಂದು ಬೆಳಿಗ್ಗೆ ಗಂ 9 ರಿಂದ ಸಂಜೆ ಗಂಟೆ 5 ರ ತನಕ ಜ್ಯೋತಿಷಿ ನಿಟ್ಟೆ ಪ್ರಸನ್ನ ಆಚಾರ್ಯ ರವರ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ನಡೆಯಲಿದೆ.
ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ದೆ ಹಾಗೂ ಕಾರ್ಯನಿರ್ವಹಣಾಧಿಕಾರಿ ಕೆ.ವಿ ಶ್ರೀನಿವಾಸರವರು ವಿನಂತಿಸಿದ್ದಾರೆ.