ನಿಡ್ಪಳ್ಳಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಬೆಟ್ಟಂಪಾಡಿ ಇದರ 12ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ಫೆ.22 ರಂದು ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಫೆ.15 ರಂದು ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು.
ದೇವಾಲಯದ ಪ್ರಧಾನ ಅರ್ಚಕ ವೇದಮೂರ್ತಿ ವೆಂಕಟ್ರಮಣ ಭಟ್ ಪ್ರಾರ್ಥಿಸಿದರು. ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಳ್ಳಾಲ್ ಶಿವಗಿರಿ ಬೀಡು, ಮೊಕ್ತೇಸರ ವಿನೋದ್ ರೈ ಬೆಟ್ಟಂಪಾಡಿ ಗುತ್ತು, ಸಹಾಯಕ ಅರ್ಚಕರಾದ ಪ್ರಸನ್ನ ಭಟ್, ದೇವಸ್ಥಾನದ ಕಚೇರಿ ಸಹಾಯಕ ವಿನಯ ಉಪಸ್ಥಿತರಿದ್ದರು.