ಪುತ್ತೂರು:ನೆಟ್ಟಣಿಗೆ ಮೂಡ್ನೂರು ಸರಕಾರಿ ಪ್ರೌಢಶಾಲೆಗೆ ಮಾಜಿ ಶಾಸಕ , ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನ ಮರದ ಭೇಟಿ ನೀಡಿ ಎಸ್. ಎಸ್ .ಎಲ್. ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಕರ್ನಾಟಕ ಮತ್ತು ಕೇರಳ ಗಡಿ ಪ್ರದೇಶದ ಪ್ರೌಢಶಾಲೆಯು ಪದವಿ ಪೂರ್ವ ಕಾಲೇಜ್ ಆಗಿ ಮೇಲ್ದರ್ಜೆಗೆ ಏರಿ ಅಭಿವೃದ್ಧಿ ಹೊಂದಲಿ. ಉತ್ತಮ ಶಿಕ್ಷಣ ನೀಡುವ ಸಂಸ್ಥೆಯಾಗಿ ಬೆಳೆಯಲಿ ಎಂದರು.

ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ. ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪರಿಚಯ ಮತ್ತು ಸಾಧನೆ ತಿಳಿಸಿ ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡುವಂತೆ ವಿನಂತಿಸಿದರು. ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ವತಿಯಿಂದ ಗೌರವಿಸಲಾಯಿತು. ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಶ್ರೀರಾಮ್ ಪಕ್ಕಳ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಫೌಝಿಯಾ ಇಬ್ರಾಹಿಂ, ಉಪಾಧ್ಯಕ್ಷ ಶ್ರೀರಾಮ ಮೇನಾಲ, ಗ್ರಾಮ ಪಂಚಾಯತಿ ಸದಸ್ಯರಾದ ಇಬ್ರಾಹಿಂ ಪಳ್ಳತ್ತೂರು ಹಾಗೂ ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಸದಸ್ಯರು ಹಾಗೂ ಪಿ .ಎಲ್. ಡಿ ಬ್ಯಾಂಕ್ ಪುತ್ತೂರು ಇದರ ನಿರ್ದೇಶಕರಾದ ವಿಕ್ರಂ ರೈ ಸಾಂತ್ಯ, ನೆಟ್ಟಣಿಗೆ ಮುಡ್ನೂರು ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ಸೂಫಿ ಬಾಂಟಡ್ಕ, ಮಧುರ ಸ್ಕೂಲ್ ಇದರ ಸಂಚಾಲಕ ಅಬ್ದುಲ್ ರಹಿಮಾನ್ ಮೇನಾಲ, ಯಾಕುಬ್ ನಾಗನಡ್ಕ, ಅಬ್ದುಲ್ ಖಾದರ್ ಸುರುಳಿ ಮೂಲೆ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕರಾದ ಪ್ರೇಮ್ ಕುಮಾರ್ ಸ್ವಾಗತಿಸಿದರು, ಶಿಕ್ಷಕರಾದ ದೇವಿಪ್ರಕಾಶ್ ಶೆಟ್ಟಿ, ದಮಯಂತಿ, ಮೋನಿಷಾ, ಮೀನಾಕ್ಷಿ , ಮಾಲಿನಿ ಸಹಕರಿಸಿದರು. ಸಮಾಜ ವಿಜ್ಞಾನ ಶಿಕ್ಷಕಿ ಇಂದಿರಾ ವಂದಿಸಿದರು. ಗಣಿತ ಶಿಕ್ಷಕರಾದ ಪುರುಷೋತ್ತಮ ಇವರು ಕಾರ್ಯಕ್ರಮ ನಿರ್ವಹಿಸಿದರು.