ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ಮಾರುಕಟ್ಟೆ ಮೇಳ ನಡೆಯಿತು.
ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನವನ್ನು ಬೆಳೆಸುವುದು, ಲಾಭ ನಷ್ಟದ ಪರಿಕಲ್ಪನೆಯನ್ನು ಮೂಡಿಸುವುದು ಹಾಗೂ ಕೊಡು ಕೊಳ್ಳುವಿಕೆಯ ಜ್ಞಾನವನ್ನು ತಿಳಿಸುವ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಗಿತ್ತು. ಸೈಂಟ್ ಆಂಟನೀಸ್ ಪ್ರೌಢ ಶಾಲೆಯ ಮುಖ್ಯಗುರು ಶ್ರೀಧರ ಗೌಡರವರು ಮೇಳವನ್ನು ಉದ್ಘಾಟಿಸಿದರು. ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ನ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ವಿಶಾಲಾಕ್ಷಿ ಪ್ರಥಮ ಖರೀದಿ ಮಾಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಸಂಸ್ಥೆಯ ಸಂಚಾಲಕರಾದ ರೆ.ಫಾ.ಹನಿ ಜೇಕಬ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಮೇಹಿ ಜಾರ್ಜ್ ಹಾಗೂ ಸದಸ್ಯರು, ಸಿಬ್ಬಂದಿವರ್ಗ, ಪಾಲಕ-ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ವಸ್ತುಗಳನ್ನು ಖರೀದಿ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಉತ್ತೇಜಿಸಿದರು.