ಕೆಯ್ಯೂರು: ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಕೆಯ್ಯೂರು ಮಾ.21ರಿಂದ 28ರ ತನಕ ನಡೆಯುವ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯು ಶ್ರೀ ಕ್ಷೇತ್ರ ದೇವಾಲಯದ ಸಭಾಂಗಣದಲ್ಲಿ ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರೀ ದೇವಸ್ಥಾನ ಶ್ರೀ ಕ್ಷೇತ್ರ ಕೆಯ್ಯೂರು ಇದರ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಕೆ ಜಯರಾಮ ರೈ ಕೆಯ್ಯೂರು ಇವರ ಅಧ್ಯಕ್ಷತೆಯಲ್ಲಿ ದೇವಾಲಯದ ಸಭಾಂಗಣದಲ್ಲಿ ನಡೆಯಿತು.

ಜಾತ್ರೋತ್ಸವದ ಪ್ರಯುಕ್ತ ವಿವಿಧ ಸಮಿತಿಗಳ ಸಂಚಾಲಕ ಮತ್ತು ಸದಸ್ಯರನ್ನು ನೇಮಿಸಲಾಯಿತು. ದೇವಾಲಯದ ನೌಕರ ಚಂದ್ರಶೇಖರ ರೈ ಕಜೆ ಲೆಕ್ಕಪತ್ರ ಮಂಡನೆ ಮಾಡಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಕೆಯ್ಯೂರು ಮಾಜಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶಶಿಧರ್ ರಾವ್ ಬೊಳಿಕಲ, ಪುತ್ತೂರು ತಾಲೂಕು ಧಾರ್ಮಿಕ ಶಿಕ್ಷಣ ಸಮಿತಿ ಸದಸ್ಯ ದಂಬೆಕಾನ ಸದಾಶಿವ ರೈ, ಕೆಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶರತ್ ಕುಮಾರ್ ಮಾಡಾವು , ಶ್ರೀ ಕ್ಷೇತ್ರ ಕೆಯ್ಯೂರು ದೇವಾಲಯದ ವ್ಯವಸ್ಥಾಪನ ಸಮಿತಿಯ ನೂತನ ಸದಸ್ಯರಾದ ಕ್ಷೇತ್ರದ ಅರ್ಚಕ ಶ್ರೀನಿವಾಸ ರಾವ್, ಜಲಜಾಕ್ಷಿ ಎ. ರೈ ಸಾಗು, ಸುಜಯ ಕೆಯ್ಯೂರು ,ಉಮಾಕಾಂತ ಬೈಲಾಡಿ, ಅಶೋಕ್ ರೈ ದೇರ್ಲ, ಕೆ.ಎಸ್ ಚಂದ್ರಶೇಖರ ಪೂಜಾರಿ ಕಣಿಯಾರು, ದಾಮೋದರ ಪೂಜಾರಿ ಕೆಂಗುಡೇಲು, ಹರಿನಾಥ ಇ. ಇಳಂತಾಜೆ, ಮಾಜಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಸದಸ್ಯರುಗಳು, ಗ್ರಾಮದ ಭಕ್ತಾದಿಗಳು, ಉಪಸ್ಥಿತರಿದ್ದರು. ಕ್ಷೇತ್ರದ ವ್ಯವಸ್ಥಾಪನ ಸಮಿತಿ ದಾಮೋದರ ಪೂಜಾರಿ ಕೆಂಗುಡೇಲು ಸದಸ್ಯ ವಂದಿಸಿದರು.