
ಪುಣಚ: ಪುಣಚ ದೇವಿನಗರ ಶ್ರೀ ಮಹಮ್ಮಾಯಿ ಜೈ ಭಾರತಿ ಮರಾಟಿ ಸಂಘದ ಶ್ರೀ ಆದಿಶಕ್ತಿ ಮಹಮ್ಮಾಯಿ ಆರಾಧನಾ ಮಂದಿರದಲ್ಲಿ ಅರ್ಧಏಕಾಹ ಭಜನಾ ಕಾರ್ಯಕ್ರಮ ಹಾಗೂ ರಾತ್ರಿ ಶ್ರೀ ಮಹಮ್ಮಾಯಿ ಅಮ್ಮನವರ ಅಂಗಾರೆ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಫೆ.28ರಂದು ನಡೆಯಿತು.
ಅಂದು ಬೆಳಿಗ್ಗೆ ಪುಣಚ ನಾರಾಯಣ ಬನ್ನಿಂತಾಯರ ಪೌರೋಹಿತ್ಯದಲ್ಲಿ ಮಹಾಗಣಪತಿ ಹೋಮ ನಡೆಯಿತು. ಕನ್ಯಾನ ಮಂಡ್ಯೂರು ಸುನಿತಾ ಈಶ್ವರ ನಾಯ್ಕರವರು ದೀಪ ಬೆಳಗಿಸಿ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವಿವಿಧ ಭಜನಾ ತಂಡದವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಮೊಟ್ಟೆತ್ತಡ್ಕ ಸುಬ್ಬ ನಾಯ್ಕರವರ ಪೌರೋಹಿತ್ಯದಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಗದ್ದಿಗೆ ಏರುವ ಕಾರ್ಯಕ್ರಮ, ಭಜನೆ, ಬಳಿಕ ದೇವಿ ಪಾತ್ರಿಯ ದರ್ಶನದೊಂದಿಗೆ ಶ್ರೀ ಮಹಮ್ಮಾಯಿ ಅಮ್ಮನವರ ಅಂಗಾರೆ ಪೂಜೆ ನಡೆದು ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.
ಸಮಾಜ ಭಾಂಧವರು, ಊರ ಪರ-ಊರ ಭಾಂಧವರು, ಗ್ರಾಮಸ್ಥರು ಪಾಲ್ಗೊಂಡು ದೇವಿಯ ಪ್ರಸಾದ ಸ್ವೀಕರಿಸಿದರು.
ಶ್ರೀ ಮಹಮ್ಮಾಯಿ ಜೈ ಭಾರತಿ ಮರಾಟಿ ಸಂಘದ ಆಡಳಿತ ಸಮಿತಿಯ ಪದಾಧಿಕಾರಿಗಳು, ಪೂಜಾ ಸಮಿತಿಯ ಪದಾಧಿಕಾರಿಗಳು ಭಕ್ತಾದಿಗಳನ್ನು ಸ್ವಾಗತಿಸಿದರು.