ಸವಣೂರು: ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ದಿನ ಹಾಗೂ ದೈವದಕೋಲವು ಮಾ.9 ರಂದು ನಡೆಯಲಿದೆ.
ಮಾ.9 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಸ್ಥಳ ಶುದ್ದಿ ,ಶ್ರೀ ಮಹಾಗಣಪತಿ ಹೋಮ ನಡೆಯಲಿದೆ. ಸಂಜೆ 6 ಗಂಟೆಗೆ ದೈವಕ್ಕೆ ಎಣ್ಣೆ ವೀಳ್ಯ ಕೊಡುವುದು ,ರಾತ್ರಿ 8 ರಿಂದ ಶ್ರೀರಾಜಗುಳಿಗ ದೈವದ ನರ್ತನ ಸೇವೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀ ರಾಜಗುಳಿಗ ಸಾನಿಧ್ಯ ಆಡಳಿತ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.