ಪುತ್ತೂರು: ಆರ್ಬಿಐ ಮಾಜಿ ನಿರ್ದೇಶಕರಾಗಿರುವ ಸಹಕಾರ ರತ್ನ ಅಗರಿ ನವೀನ್ ಭಂಡಾರಿಯವರಿಗೆ ಇತ್ತೀಚಿಗೆ ಬೆಂಗಳೂರಿನಲ್ಲಿ ಜರಗಿದ ಸಮಾರಂಭದಲ್ಲಿ ಅನ್ವೇಷಣಾ ಅಕಾಡೆಮಿಯಿಂದ ಕೊಡಲ್ಪಡುವ ಸಮಾಜಶ್ರೀ ರಾಜ್ಯ ಪ್ರಶಸ್ತಿಯನ್ನು ಚಲನಚಿತ್ರ ನಿರ್ದೇಶಕ ಹಾಗೂ ನಟ ಎಸ್.ನಾರಾಯಣರವರು ಪ್ರಧಾನ ಮಾಡಿ ಗೌರವಿಸಿದರು.
ಅನ್ವೇಷಣಾ ಅಕಾಡೆಮಿ ಸ್ಥಾಪಕ ಅಧ್ಯಕ್ಷ ಭದ್ರಾವತಿ ರಾಮಾಚಾರಿರವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಅಗರಿ ನವೀನ್ ಭಂಡಾರಿಯವರು ಸಮಾಜ ಸೇವೆ, ಸಹಕಾರ, ಧಾರ್ಮಿಕ, ರಾಜಕೀಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಅಭೂತಪೂರ್ವವಾದ ಸೇವೆಯನ್ನು ಮಾಡುತ್ತಿದ್ದಾರೆ. ಸಮಾಜ ಸೇವಾ ಕ್ಷೇತ್ರದ ಅವಿರತ ಸಾಧನೆಗಾಗಿ ಸಮಾಜಶ್ರೀ ರಾಜ್ಯ ಪ್ರಶಸ್ತಿಯನ್ನು ನೀಡಲಾಗಿದೆ.