ಮಾ.25-26: ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ, ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು : ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಹಾಗೂ ಭಜನಾ ಸಂಭ್ರಮ(ಅರ್ಧ ಏಕಾಹ ಹಾಗೂ ಕುಣಿತ ಭಜನೆ) ಕಾರ‍್ಯಕ್ರಮ ಮಾ.25 ಮತ್ತು 26 ರಂದು ನಡೆಯಲಿದೆ.

ಇದರ ಆಮಂತ್ರಣ ಪತ್ರ ಬಿಡುಗಡೆಯು ಮಾ.2 ರಂದು ದೇವಾಲಯದಲ್ಲಿ ಜರಗಿತು. ದೇವಾಲಯದ ಅರ್ಚಕ ಪದ್ಮನಾಭ ಕುಂಜತ್ತಾಯರವರು ಪ್ರಾರ್ಥನೆ ಸಲ್ಲಿಸಿದರು.

ದೇವಾಲಯದ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ, ಕಾರ್ಯದರ್ಶಿ ಎನ್. ಶಿವಪ್ರಸಾದ್ ಶೆಟ್ಟಿ ಕಿನಾರ, ಸದಸ್ಯರುಗಳಾದ ನವೀನ್ ಕುಮಾರ್ ಶೆಟ್ಟಿ ಮುಗೇರುಗುತ್ತು, ಆಶಾ ಪ್ರವೀಣ್ ಕಂಪ, ರಾಕೇಶ್ ರೈ ಕೆಡೆಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ದಿವಾಕರ್ ಬಸ್ತಿ, ಹರಿಶ್ಚಂದ್ರ ಕಾಯರ್ಗ, ಸಂತೋಷ್ ಕಾಯರ್ಗ ಹಾಗೂ ಮನೋಹರ್ ಇಡ್ಯಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here