ಬಡಗನ್ನೂರು: ಪಡುವನ್ನೂರು ಗ್ರಾಮ ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದ ವಾರ್ಷಿಕ ನೇಮೋತ್ಸವವು ಸ್ವಾಮಿ ಕೊರಗಜ್ಜ ಸೇವಾ ಸಮಿತಿ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.9 ಮತ್ತು 10ರಂದು ಶ್ರೀ ಕ್ಷೇತ್ರದಲ್ಲಿ ನಡೆಯಲಿರುವುದು.
ಆ ಪ್ರಯುಕ್ತ ತಾವೆಲ್ಲರೂ ಬಂದು ಈ ದೇವತಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿ, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೇವಾ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಶಬರಿನಗರ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎಂ ಮರದಮೂಲೆ, ಉಪಾಧ್ಯಕ್ಷ ಸದಾನಂದ ರೈ ಬೋಳಂಕೂಡ್ಲು, ಜೊತೆ ಕಾರ್ಯದರ್ಶಿ ವಿನಯ ಕುಮಾರ್ ದೇವಸ್ಯ, ಕೋಶಾಧಿಕಾರಿ ಭಾಸ್ಕರ ಹೆಗ್ಡೆ ಶಬರಿನಗರ, ಪೂಜಾಕರ್ಮಿ ಮಾಧವ ಸಾಲಿಯಾನ್ ಮರದಮೂಲೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಾರ್ಯಕ್ರಮಗಳು;-
ಮಾ.9ರಂದು ಬೆಳಿಗ್ಗೆ ಗಂಟೆ 7ಕ್ಕೆ ಗಣಪತಿಹೋಮ, 8ರಿಂದ ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ, ಭಜನಾ ಕಾರ್ಯಕ್ರಮದಲ್ಲಿ ಸ್ವಾಮಿ ಕೊರಗಜ್ಜ ಬಾಲ ಭಜನಾ ಸಂಘ ಶಬರಿನಗರ, ಸುಳ್ಯಪದವು, ಶ್ರೀ ಹರೀ ನಾಮಾಮೃತ ಮಕ್ಕಳ ಭಜನಾ ತಂಡ ಮರದಮೂಲೆ, ಶ್ರೀ ಮಹಾಲಕ್ಷ್ಮೀ ಮಹಿಳಾ ಭಜನಾ ಮಂಡಳಿ, ಸುಳ್ಯಪದವು, ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಸುಳ್ಯಪದವು, ಶ್ರೀ ಮಹಾವಿಷ್ಣು ಭಜನಾ ಸಂಘ ಸುಳ್ಯಪದವು, ಶ್ರೀ ಅಯ್ಯಪ್ಪ ಭಜನಾ ಮಂದಿರ ಸುಳ್ಯಪದವು ತಂಡದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
12ರಿಂದ ದಾಮೋದರ ಯಂ. ಮರದಮೂಲೆ ಇವರ ಸಾರಥ್ಯದಲ್ಲಿ ಭಕ್ತಿಗಾನ, ಮಧ್ಯಾಹ್ನ ಗಂ.115 ರಿಂದ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂ 4 ರಿಂದ ಶ್ರೀ ಗುಳಿಗ ದೈವದ ನೇಮೋತ್ಸವ, ರಾತ್ರಿ ಗಂ 7 ರಿಂದ ನಾಟಕ ʼದೇವತೆʼ 8ಕ್ಕೆ ಶ್ರೀ ದೈವದ ಭಂಡಾರ ತೆಗೆಯುವುದು, ರಾತ್ರಿ ಗಂ 8-30ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ಗಂ.11ರಿಂದ ಶ್ರೀ ಕೊರಗ ತನಿಯ ದೈವದ ನೇಮೋತ್ಸವ, ಮಾ.10ರಂದು ಪ್ರಾತಃಕಾಲ ಶ್ರೀ ದೈವದ ಪ್ರಸಾದ ವಿತರಣೆ ನಡೆಯಲಿರುವುದು.
ಕಾರ್ಯಕ್ರಮದ ಉದ್ಘಾಟನೆ;-
ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯಪದವು ನವೋದಯ ವಿದ್ಯಾನಂಸ್ಥೆಯ ಮುಖ್ಯ ಶಿಕ್ಷಕ ಸುಕೇಶ್ ರೈ ಕುತ್ಯಾಳ ಉದ್ಘಾಟನೆ ಮಾಡಲಿದ್ದಾರೆ. ಸಂಗೀತ ಮತ್ತು ಭಜನಾ ಶಿಕ್ಷಕರಾದ ದಾಮೋದರ ಯಂ ಮರದಮೂಲೆ ಭಜನಾ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ನಾಟಕ ಪ್ರದರ್ಶನ
ರಾತ್ರಿ ಗಂ.7ರಿಂದ ಫ್ರೆಂಡ್ಸ್ ಕಲಾವಿದೆರ್ ಸುಳ್ಯಪದವು ಇದರ ಸದಸ್ಯರಿಂದ ಶಶಿಧರ್ ಕೆ. ಬಂಡಿತ್ತಡ್ಕ ವಿರಚಿತ ತುಳು ಸಾಂಸಾರಿಕ ಮತ್ತು ಹಾಸ್ಯಮಯ ನಾಟಕ ದೇವತೆ ಪ್ರದರ್ಶನ ನಡೆಯಲಿದೆ.