ಸವಣೂರು: ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಒಳಪಟ್ಟ ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ದಿನ ಹಾಗೂ ದೈವದಕೋಲವು ಮಾ.9ರಂದು ನಡೆಯಿತು.
ಮಾ.9ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ ,ಸ್ಥಳ ಶುದ್ದಿ , ಶ್ರೀ ಮಹಾಗಣಪತಿ ಹೋಮ ನಡೆಯಿತು. ಸಂಜೆ ದೈವಕ್ಕೆ ಎಣ್ಣೆ ವೀಳ್ಯ ಕೊಟ್ಟು ,ರಾತ್ರಿ ಶ್ರೀರಾಜಗುಳಿಗ ದೈವದ ನರ್ತನ ಸೇವೆ ,ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ, ಮೊಕ್ತೇಸರ ಅರುಣ್ ಕುಮಾರ್ ರೈ ನಳೀಲು, ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಪೆರುವಾಜೆ, ನಿರಂಜನ್ ರೈ ಪಾಲ್ತಾಡು,ಚೆನ್ನಾವರ ಉಳ್ಳಾಕುಲು ದೈವಸ್ಥಾನದ ಕಾರ್ಯದರ್ಶಿ ದೀಕ್ಷಿತ್ ಜೈನ್, ಶ್ರೀ ರಾಜಗುಳಿಗ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಪಿ.ಮಂಜಪ್ಪ ರೈ , ಕಾರ್ಯಾಧ್ಯಕ್ಷ ದೇವರಾಜ ಆಳ್ವ,ಅಧ್ಯಕ್ಷ ಡಾ.ಹರಿಕೃಷ್ಣ ರೈ ಜಿ.ಎನ್., ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚೆನ್ನಾವರ, ಉಪಾಧ್ಯಕ್ಷರಾದ ಸುಧಾಮ ಮಣಿಯಾಣಿ ಸುಂದರ ನಾಯ್ಕ , ಜತೆ ಕಾರ್ಯದರ್ಶಿಗಳಾದ ದಿನೇಶ್ ಶಾಂತಿಮೂಲೆ, ಶಶಿಕುಮಾರ್, ಕೋಶಾಧಿಕಾರಿ ಬಾಬು ನಾಯ್ಕ ಶಾಂತಿಮೂಲೆ ಮೊದಲಾದವರು ಉಪಸ್ಥಿತರಿದ್ದರು.