ಬಡಗನ್ನೂರು : ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಸೇವಾ ಸಮಿತಿ ವತಿಯಿಂದ ನಡೆದ ಸ್ವಾಮಿ ಕೊರಗಜ್ಜ ಕ್ಷೇತ್ರದ ವಾರ್ಷಿಕ ನೇಮೋತ್ಸವ ಅಂಗವಾಗಿ ಶ್ರೀ ಗುಳಿಗ ದೈವದ ನೇಮೋತ್ಸವ ಮಾ.9 ರಂದು ಶ್ರೀ ಕ್ಷೇತ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕೊರಗಜ್ಜ ಸೇವಾ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಶಬರಿನಗರ ,ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎಂ. ಮರದಮೂಲೆ ,ಉಪಾಧ್ಯಕ್ಷ ಸದಾನಂದ ರೈ ಬೋಳಂಕೂಡ್ಲು ,ಜೊತೆ ಕಾರ್ಯದರ್ಶಿ ವಿನಯ ಕುಮಾರ್ ದೇವಸ್ಯ ಕೋಶಾಧಿಕಾರಿ ಭಾಸ್ಕರ ಹೆಗ್ಡೆ ಶಬರಿನಗರ, ಪೂಜಾಕರ್ಮಿ ಮಾಧವ ಸಾಲಿಯಾನ್ ಮರದಮೂಲೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಮತ್ತು ಊರ ಪರವೂರ ಭಕ್ತಾಧಿಗಳು ಭಾಗವಹಿಸಿದ್ದರು.