ಕಡಬ ಶ್ರೀ ಜಯದುರ್ಗಾಪರಮೇಶ್ವರೀ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕುಂಭಾಭಿಷೇಕ : ನಾಳೆ ಸಾಮೂಹಿಕ ಶ್ರಮದಾನ-ಚಪ್ಪರ ಮುಹೂರ್ತ

0

ಕಡಬ: ಇಲ್ಲಿನ ಜಯದುರ್ಗಾಪರಮೇಶ್ವರೀ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕುಂಭಾಭಿಷೇಕ ಮಹೋತ್ಸವವು ಏ.16ರಿಂದ 21ರವರೆಗೆ ನಡೆಯಲಿದ್ದು, ಈ ಕಾರ್ಯಕ್ರಮದ ಪೂರ್ವ ತಯಾರಿಗಳು ನಡೆಯುತ್ತಿದ್ದು, ಮಾ.16ರಂದು ಚಪ್ಪರ ಮುಹೂರ್ತ ಹಾಗೂ ಸಾಮೂಹಿಕ ಶ್ರಮದಾನ ನಡೆಯಲಿದೆ.


ಈಗಾಗಲೇ ಬ್ರಹ್ಮಕುಂಭಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆಗೊಂಡಿದ್ದು, ಪೂರ್ವ ತಯಾರಿಗಳು ನಡೆದಿದೆ. ಕೆಲಸ ಕಾರ್ಯಗಳಿಗೆ ಅನುಕೂಲವಾಗುವಂತೆ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯ ಸಂಚಾಲಕರು, ಸದಸ್ಯರನ್ನು ಸೇರಿಸಿಕೊಂಡು ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದೆ.

ಬ್ರಹ್ಮಕುಂಭಾಭಿಷೇಕದ ಅಧ್ಯಕ್ಷ ಅರುಣ್ ಕುಮಾರ್ ಜಡೆಮನೆ, ಗೌರವಾಧ್ಯಕ್ಷ ಎಂ. ಸುರೇಶ್ ರಾವ್, ಶ್ರೀ ಶೃಂಗೇರಿ ಜಗದ್ಗುರು ಅಭಿನಂದನ ಸಮಿತಿಯ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಅವರ ಮಾರ್ಗದರ್ಶನದಲ್ಲಿ ಕೆಲಸ ಕಾರ್ಯಗಳು ನಡೆಯಲಿದೆ. ಏ.16ರಿಂದ ಏ.21ರವರೆಗೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕುಂಭಾಭಿಷೇಕ ಮಹೋತ್ಸವ ವಿಜೃಂಭನೆಯಿಂದ ನಡೆಸಲು ಉದ್ದೇಶಿಸಲಾಗಿದೆ. ಮಾ.16ರಂದು ಚಪ್ಪರ ಮುಹೂರ್ತ, ದೇವಳದ ವಠಾರ ಸ್ವಚ್ಚತೆ ಹಾಗೂ ಆಮಂತ್ರಣ ವಿತರಣೆಯು ನಡೆಯಲಿದೆ.

LEAVE A REPLY

Please enter your comment!
Please enter your name here