ಮುಂಡೂರು ಗ್ರಾಮ ಪಂಚಾಯತ್ ವಿಶೇಷ ಚೇತನರ ಗ್ರಾಮ ಸಭೆ

0

ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ ವತಿಯಿಂದ 2024-25ನೇ ಸಾಲಿನ ವಿಶೇಷ ಚೇತನರ ಗ್ರಾಮ ಸಭೆ ಮಾ.೧೦ರಂದು ಮುಂಡೂರು ಗ್ರಾ.ಪಂ ಸಭಾಂಗಣದಲ್ಲಿ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಎನ್‌ಎಸ್‌ಡಿ ಅಧ್ಯಕ್ಷತೆಯಲ್ಲಿ ನಡೆಯಿತು.

ಉಪಾಧ್ಯಕ್ಷೆ ಯಶೋಧ, ಗ್ರಾ.ಪಂ ಪಿಡಿಓ ಮನ್ಮಥ ಎ, ಕಾರ್ಯದರ್ಶಿ ಸೂರಪ್ಪ ಕೆ ಹಾಗೂ ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.
ಮಾರ್ಗದರ್ಶಿ ಅಧಿಕಾರಿಯಾಗಿ ಆಗಮಿಸಿದ ಪುತ್ತೂರು ತಾ.ಪಂ ಮಟ್ಟದ ವಿಕಲಚೇತನರ ಪುನರ್ ವಸತಿ ಕಾರ್ಯಕರ್ತ ನವೀನ್ ಕುಮಾರ್‌ರವರು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ವಿಕಲ ಚೇತನರಿಗೆ ಸೋಲಾರ್ ಆಧಾರಿತ ಸ್ವಂತ ಉದ್ಯೋಗದಲ್ಲಿ ಶೇ.50ರಷ್ಟು ರಿಯಾಯಿತಿ ದೊರೆಯುವ ಬಗ್ಗೆ ತಿಳಿಸಿದರು.

ವಿಕಲಚೇತನರಿಗೆ ಅನುಕಂಪ ಬೇಡ, 2016 ಅಧಿನಿಯಮ ಕಾಯ್ದೆ ಪ್ರಕಾರ ಎಲ್ಲಾ ಕ್ಷೇತ್ರದಲ್ಲಿ ಸಮಾನ ಅವಕಾಶ ದೊರೆಯಬೇಕು. ವಿಕಲ ಚೇತನರ 21ವಿಧದ ವಿಕಲತೆಯ ಬಗ್ಗೆ 2016 ವಿಕಲ ಚೇತನರ ಅದಿನಿಯಮ ಬಗ್ಗೆ ಬ್ಯಾಟರಿ ಚಾಲಿತ ವೀಲ್‌ಚೇರ್ ಬಗ್ಗೆ, 4 ವಿಧದ ಆರೈಕೆದಾರರ ಪ್ರೋತ್ಸಾದನ ಬಗ್ಗೆ ಹಿರಿಯ ನಾಗರಿಕರ ಕಾಯ್ದೆ, ಹಿರಿಯ ನಾಗರಿಕರ ಗುರುತು ಚೀಟಿ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಬಗ್ಗೆ ಮಾಹಿತಿ ನೀಡಿದರು.


ಸರ್ವೆ ಪ್ರಾ.ಆ.ಕೇಂದ್ರದ ವೈದ್ಯಾಧಿಕಾರಿ ಡಾ.ನಮಿತಾ ನಾಯ್ಕ್ ಅವರು ವಿಕಲ ಚೇತನರ ಹಾಗೂ ಎಂಡೋ ಪೀಡಿತರ ಅರೋಗ್ಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಪಿಡಿಓ ಮನ್ಮಥ ಎ ಗ್ರಾಮ ಪಂಚಾಯತ್ 5%ಅನುದಾನದ ಮಾಹಿತಿ ಹಾಗೂ ವಿಕಲ ಚೇತನರ ವಿಶೇಷ ಗ್ರಾಮ ಸಭೆಯ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿಕಲಚೇತನರು, ವಿಕಲಚೇತನರ ಆರೈಕೆದಾರರು ಭಾಗವಹಿಸಿದ್ದರು. ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರ ಹಿರಿಯ ಆರೋಗ್ಯ ಸಹಾಯಕರು, ಮುಂಡೂರು ವಿಶೇಷ ಚೇತನರ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರಾದ ಸತೀಶ್ ಕೆ.ಹಾಗೂ ಮುಂಡೂರು ಗ್ರಾ.ಪಂ ಸಿಬ್ಬಂದಿಗಳು ಸಹಕಾರ ನೀಡಿದ್ದರು.
ಕಾರ್ಯದರ್ಶಿ ಸೂರಪ್ಪ ಕೆ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here