ಪುತ್ತೂರು: ಕಲ್ಲೇಗ ಶ್ರೀ ಕಲ್ಕುಡ ಮತ್ತು ಕಲ್ಲುರ್ಟಿ ದೈವಗಳ ಮೂಲಸ್ಥಾನ ಕಬಕ ಗ್ರಾಮದ ಕಾರ್ಜಾಲು ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಧೂಮಾವತಿ ದೈವದ ವಾರ್ಷಿಕ ದೊಂಪದ ಬಲಿ ಜಾತ್ರೋತ್ಸವವು ಮಾ.15ರ ರಾತ್ರಿ ನಡೆಯಿತು.

ರಾತ್ರಿ ಕಾರ್ಜಾಲು ಗುತ್ತಿನಿಂದ ಧೂಮಾವತಿ, ಕಲ್ಕುಡ ಮತ್ತು ಕಲ್ಲುರ್ಟಿ ದೈವಗಳ ಭಂಡಾರ ಬಂದ ಬಳಿಕ ಗೋಂದಳ್ ಪೂಜೆ, ಗ್ರಾಮದೈವ ಧೂಮಾವತಿ, ಕಲ್ಕುಡ, ಕಲ್ಲುರ್ಟಿ ಹಾಗೂ ಇತರ ದೈವಗಳ ದೊಂಪದ ಬಳಿ ನೇಮೋತ್ಸವ ನಡೆಯಿತು. ಇದೇ ಸಂದರ್ಭ ಕುಣಿತ ಭಜನೆ ಮಾಡಿದ ಕೊಡಿಪ್ಪಾಡಿ ಲಕ್ಷ್ಮೀಜನಾರ್ದನ ಭಜನಾ ಮಂಡಳಿಯ ಸದಸ್ಯರನ್ನು ಅಜಿತ್ ಕುಮಾರ್ ಅವರ ನೇತೃತ್ವದಲ್ಲಿ ಗೌರವಿಸಲಾಯಿತು.