ವಿಶ್ವ ವಿದ್ಯಾಲಯ ಕಾಲೇಜು ನೆಲ್ಯಾಡಿಯಲ್ಲಿ ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮ

0

ವಿಶ್ವ ವಿದ್ಯಾಲಯ ಕಾಲೇಜು ನೆಲ್ಯಾಡಿಯಲ್ಲಿ ಮಾ.18 ಮಂಗಳವಾರದಂದು ದಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಸಂಸ್ಥೆಯ ಕೌನ್ಸಿಲರ್ ಕಂ ಟ್ರೈನರ್ ಮಂಜೂಷ ಇವರು ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ಇವರ ಅನುಮತಿಯೊಂದಿಯೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮತ್ತು ಆಪ್ತ ಸಮಾಲೋಚನೆ ಸಮಿತಿ ವತಿಯಿಂದ ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮದಡಿ ತರಬೇತು ಕಾರ್ಯಕ್ರಮ ನಡೆಸಿಕೊಟ್ಟರು.

ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ನೋಂದಣಿ ಮಾಡಿಸುವುದರ ಮೂಲಕ ಉದ್ಯೋಗ ಕಾರ್ಡ್ ನೀಡಿ ವಿದ್ಯಾರ್ಥಿಗಳಿಗೆ ಅದರ ಉಪಯುಕ್ತತೆ ಹಾಗೂ ಬಳಸುವಿಕೆಯ ಕುರಿತಂತೆ ಮಾಹಿತಿ ನೀಡಿದರು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಒದಗಿಸುವುದರೊಂದಿಗೆ, ಹೇಗೆ ಸಂದರ್ಶನ ಎದುರಿಸುವುದು ಎಂಬುದರ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡುವುದರೊಂದಿಗೆ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಡಾ. ಸೀತಾರಾಮ ಪಿ ಸಂಚಾಲಕರು, ವೃತ್ತಿ ಮಾರ್ಗದರ್ಶನ ಮತ್ತು ಆಪ್ತ ಸಮಾಲೋಚನೆ ಸಮಿತಿ, ಸ್ವಾಗತಿಸಿದರು. ಪಾವನ ರೈ ಉಪನ್ಯಾಸಕಿ, ವಾಣಿಜ್ಯ ವಿಭಾಗ ಇವರು ಧನ್ಯವಾದ ಸಮರ್ಪಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here