ಪುತ್ತೂರು: ಕಳೆದ 9 ವರ್ಷಗಳ ಹಿಂದೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಿಬ್ಬರನ್ನು ಪುತ್ತೂರಿನ ನ್ಯಾಯಾಲಯವು ದೋಷ ಮುಕ್ತಗೊಳಿಸಿ ಬಿಡುಗಡೆಗೊಳಿಸಿದೆ.
ಕಳೆದ 25.07.2016 ರಂದು ಪುತ್ತೂರು ತಾಲೂಕು ಬಂಟರ ಗ್ರಾಮದ ಚಡವು ಎಂಬಲ್ಲಿ, ಆರೋಪಿಗಳಿಬ್ಬರು ಸೇರಿಕೊಂಡು, ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ತೀರ್ಥೇಶ್ ಎಂಬವರನ್ನು ತಡೆದು ನಿಲ್ಲಿಸಿ ಅವರ ಮೇಲೆ ಚೂರಿಯಿಂದ ಹಲ್ಲೆ ನಡೆಸಿ ಗಾಯಗೊಳಿಸಿ ಕೊಲೆ ಮಾಡುವುದಾಗಿ ಬೆದರಿಸಿದ, ಆರೋಪಿಗಳಿಬ್ಬರಾದ ಕಡಬ ಮಾರ್ದಾಳ ನಿವಾಸಿಗಳಾದ ಅಬ್ದುಲ್ ರಝಕ್ ಹಾಗೂ ಅಬ್ದುಲ್ ಕರೀಂ ಎಂಬವರ ವಿರುದ್ಧ ಕಡಬ ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಪ್ರಕರಣದ ತನಿಖೆ ನಡೆಸಿದ ಪುತ್ತೂರಿನ ನ್ಯಾಯಾಲಯದ ನ್ಯಾಯಾಧೀಶರಾದ ಯೋಗಿಂದ್ರ ಶೆಟ್ಟಿ ಯವರು, ಪ್ರಕರಣ ಸಾಬೀತುಪಡಿಸಲು ಅಭಿಯೋಜನ ಪಕ್ಷವು ವಿಫಲವಾದ ಹಿನ್ನೆಲೆಯಲ್ಲಿ ಆರೋಪಿಗಳಿಬ್ಬರನ್ನು ದೋಷ ಮುಕ್ತಗೊಳಿಸಿ ಬಿಡುಗಡೆಗೊಳಿಸಿ ಆದೇಶಿಸಿದೆ. ಆರೋಪಿಗಳ ಪರವಾಗಿ ಪುತ್ತೂರಿನ ಹಿರಿಯ ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಸಾತ್ವಿಕ್ ಆರಿಗ ಮತ್ತು ಅಶ್ರಫ್ ಅಗ್ನಾಡಿ ವಾದಿಸಿದ್ದರು.