ಮಾ.20,21: ಕೊಣಾಲು ಕಡೆಂಬಿಲತ್ತಾಯ ಗುಡ್ಡೆ ದೈವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ, ನೇಮೋತ್ಸವ

0

ನೆಲ್ಯಾಡಿ: ಕೊಣಾಲು ಗ್ರಾಮದ ಕಡೆಂಬಿಲತ್ತಾಯ ಗುಡ್ಡೆ ಚಕ್ರವರ್ತಿ ಕೊಡಮಣಿತ್ತಾಯಿ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ ಚಕ್ರವರ್ತಿ ಕೊಡಮಣಿತ್ತಾಯಿ, ದೈವಂಕ್ಲು, ಮೈಸಂತಾಯ, ಕಡೆಂಬಿಲತ್ತಾಯ, ಪಂಜುರ್ಲಿ, ಶಿರಾಡಿದೈವ, ಕಲ್ಕುಡ, ಕಲ್ಲುರ್ಟಿ, ಗುಳಿಗ ದೈವಗಳ 12ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಮತ್ತು ಭಂಡಾರ ಹಿಡಿದು ನೇಮೋತ್ಸವ ಮಾ.20 ಮತ್ತು 21ರಂದು ನಡೆಯಲಿದೆ.

ಮಾ.20ರಂದು ಬೆಳಿಗ್ಗೆ 6.30ಕ್ಕೆ ಕಡೆಂಬಿಲ ನಾಗಬನದಲ್ಲಿ ನಾಗತಂಬಿಲ ನಡೆಯಲಿದೆ. 7ರಿಂದ ದೈವಸ್ಥಾನದಲ್ಲಿ ಗಣಹೋಮ, ಕಲಶಪೂಜೆ, 10ಕ್ಕೆ ದೈವಗಳಿಗೆ ಕಲಶಾಭಿಷೇಕ, ತಂಬಿಲ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.30ಕ್ಕೆ ತೋರಣ ಮುಹೂರ್ತ, ಗ್ರಾಮಸ್ಥರಿಂದ ದೈವಗಳಿಗೆ ಪ್ರಾರ್ಥನೆ ನಡೆಯಲಿದೆ. ಬಳಿಕ ಎಣ್ಣೆತ್ತೋಡಿಯಿಂದ ಶಿರಾಡಿ ದೈವದ ಭಂಡಾರ ತರುವುದು, ಕಾಯರ್ತಡ್ಕದಿಂದ ಕಲ್ಕುಡ, ಕಲ್ಲುರ್ಟಿ, ಗುಳಿಗ ದೈವಗಳ ಭಂಡಾರ ತರುವ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9ರಿಂದ ಅನ್ನಸಂತರ್ಪಣೆ, ನಂತರ ನೇಮೋತ್ಸವ ನಡೆಯಲಿದೆ. ಮಾ.21ರಂದು ಬೆಳಿಗ್ಗೆ ನೇಮೋತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಮಾ.22ರಂದು ಮಧ್ಯಾಹ್ನ 2ಗಂಟೆಗೆ ಅಮ್ಮನವರ ಪೂಜೆ, ಭೈರವ ದೈವಕ್ಕೆ ಹರಕೆ ನಡೆಯಲಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ರೈ ಕೊಣಾಲುಗುತ್ತು, ಕಾರ್ಯದರ್ಶಿ ವಿಶ್ವಾಸ್ ಕಾಯರ್ತಡ್ಕ, ಕೋಶಾಧಿಕಾರಿ ಧರ್ಣಪ್ಪ ಗೌಡ ಕೋಲ್ಪೆ ಹಾಗೂ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here