ಸೂಡ ಅಧ್ಯಕ್ಷರಿಂದ ನೂತನ ಪುತ್ತೂರು ಸಹಾಯಕ ಕಮಿಶನರ್ ಭೇಟಿ

0

ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆಗೆ ಜಮೀನು ಮಂಜೂರಾತಿಗೆ ಕೋರಿಕೆ

ಪುತ್ತೂರು: ಇತ್ತೀಚೆಗೆ ಪುತ್ತೂರು ಉಪ ವಿಭಾಗದ ಸಹಾಯಕ ಕಮಿಶನರ್ ಆಗಿ ಅಧಿಕಾರ ಸ್ವೀಕರಿಸಿದ ಸ್ಟಲ್ಲ ವಿ. ಯವರನ್ನು ಸುಳ್ಯ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ನೇಮಕಗೊಂಡ ಕೆ.ಎಂ
ಮುಸ್ತಫ ಪುತ್ತೂರು ಎಸಿ ಕಚೇರಿಯಲ್ಲಿ ಭೇಟಿಯಾದರು.
ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ಪೌರ ಕಾರ್ಮಿಕರಿಗೆ ನಿವೇಶನ ಮಂಜೂರಾಗದೆ ಗೃಹ ಭಾಗ್ಯ ಯೋಜನೆ ವಿಳಂಬವಾಗುತ್ತಿದ್ದು ಎಸಿ ಕಚೇರಿಯಲ್ಲಿರುವ ಪ್ರಸ್ತಾವನೆಗೆ ಮಂಜೂರಾತಿ ನೀಡಿ ಜಮೀನು ಸ್ವಾದೀನತೆ ನೀಡುವಂತೆ ವಿನಂತಿಸಿದರು.
ಕೂಡಲೇ ಮಂಜೂರಾತಿಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಟಿ. ಎಂ. ಶಹೀದ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here