ಪುತ್ತೂರು: ವಿದ್ವತ್ ಪಿಯು ವಿದ್ಯಾರ್ಥಿ ಹಾಗೂ ಬೋಧಕ ಸಿಬ್ಬಂದಿಯಿಂದ ಭಾರತೀಯ ಮೂಲದ ಸುನೀತ ವಿಲಿಯಮ್ಸ್ ಹಾಗೂ ಅಮೆರಿಕದ ಬುಚ್ ವಿಲ್ಮೋರ್ ರವರಿಗೆ ಗೌರವಾರ್ಪಣೆ ಸಲ್ಲಿಸಿದರು. ಬಾಹ್ಯಾಕಾಶದಿಂದ ಭೂಮಿಗೆ ಬಂದಿಳಿದ ಐತಿಹಾಸಿಕ ಸಾಹಸದ ಕ್ಷಣದ ದೃಶ್ಯಗಳನ್ನು ಮಕ್ಕಳಿಗೆ ತೋರಿಸಿದರು.
ಸಂವಾದ ಕಾರ್ಯಕ್ರಮದಲ್ಲಿ ಬಾಹ್ಯಾಕಾಶ ಸಂಶೋಧನೆಯಲ್ಲಿ ಮಕ್ಕಳು ಅಭ್ಯಾಸ ಮಾಡುವ ಭೌತಶಾಸ್ತ್ರದ ಥಿಯರಿ ಹೇಗೆ ಉಪಯೋಗಿಸಲ್ಪಡುತ್ತದೆ , ಭೌತಶಾಸ್ತ್ರ ವಿಷಯ ತಜ್ಞ, ಅತುಕುರಿ ನರೇಶ್ ರವರು ವಿವರಿಸಿದರು. ರಸಾಯನ ಶಾಸ್ತ್ರ ದಲ್ಲಿ ಮಕ್ಕಳು ಕಲಿಯುವ ಥಿಯರಿಗಳು ಹೇಗೆ ಉಪಯೋಗಿಸಲ್ಪಡುತ್ತವೆ ಎಂಬುದನ್ನು ರಸಾಯನಶಾಸ್ತ್ರ ವಿಷಯತಜ್ಞ ಪ್ರತಾಪ್ ದೊಡ್ಡಮನೆ ಯವರು ವಿವರಿಸಿದರು.
ವೈಜ್ಞಾನಿಕ ಕುತೂಹಲ ಮೂಡಿಸುವ ಪ್ರಮುಖ ಉದ್ದೇಶ ಹೊಂದಿರುವ ಇನ್ಸ್ಪೈರ್ ವಿದ್ವತ್ ವೇದಿಕೆ ಕಾರ್ಯಕ್ರಮ ಆಯೋಜಿಸಿತ್ತು.ಗ್ರೂಪ್ ಕ್ಯಾಪ್ಟನ್ ರಾಹುಲ್ ಸ್ವಾಮಿ ಗೌರವ ವಂದನೆಯ ಕಾರ್ಯಕ್ರಮ ನೆರವೇರಿಸಿದರು.
ಶೈಕ್ಷಣಿಕ ನಿರ್ದೇಶಕ ಗಂಗಾಧರ ಈ ಮಂಡಗಳಲೆ ಸುನೀತಾ ವಿಲಿಯಮ್ಸ್ ರವರ ಸಾಹಸಗಾಥೆಯ ವಿವರ ನೀಡಿ, ಪ್ರತಿಭಾವಂತರಿಗಿರುವ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು . ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು. ಜೀವಶಾಸ್ತ್ರ ಉಪನ್ಯಾಸಕಿ ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು.