ಜಿ ಎಲ್ ಆಚಾರ್ಯ ಜನ್ಮ ಶತಾಬ್ದಿ- ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಕಾರಂಜಿ ಹಸ್ತಾಂತರ

0

ಪುತ್ತೂರು: ಕಾರಂಜಿಯಲ್ಲೂ ಒಂದು ಧ್ಯೇಯ ಇದೆ ಅದರ ನೀರು ಹೇಗೆ ಮೇಲಕ್ಕೆ ಚಿಮ್ಮುತ್ತದೋ ಅದೇ ರೀತಿ ನಮ್ಮ ಜೀವನೋತ್ಸಾಹವು ಮೇಲೆ ಏರುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.


ಅವರು ಪುತ್ತೂರಿನ ವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮುಂಭಾಗದಲ್ಲಿ, ದಿವಂಗತ ಜಿ.ಎಲ್.ಆಚಾರ್ಯ ಅವರ ಜನ್ಮ ಶತಾಬ್ಧಿಯ ಸನೆನಪಿಗಾಗಿ ಅವರ ಪುತ್ರ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಅವರು ಕೊಡುಗೆಯಾಗಿ ನೀಡಿದ ಕಾರಂಜಿಯ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತಾಡಿದರು. ದಿವಂಗತ ಜಿ.ಎಲ್.ಆಚಾರ್ಯ ಅವರು ಅಂದಿನ ದಿನಗಳಲ್ಲಿ ವಿದ್ಯಾವರ್ಧಕ ಸಂಘದ ಏಳಿಗೆಗಾಗಿ ದುಡಿದವರು. ಇಂದು ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಅನೇಕ ಸಮಾಜಮುಖೀ ಕಾರ್ಯಗಳನ್ನು ನಡೆಸುತ್ತಿರುವುದು ಸಂತೋಷವನ್ನು ತಂದಿದೆ. ಇದರಿಂದ ಅವರ ಆತ್ಮಕ್ಕೂ ಸಂತೋಷವಾಗಿರಬಹುದು ಎಂದರು.


ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್.ಪಿ, ನಿರ್ದೆಶಕ ಬಲರಾಮ ಆಚಾರ್ಯ.ಜಿ, ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಎಲೆಕ್ಟ್ರಾನಿಕ್ಸ್ ವಿಭಾಗದ ಪ್ರಯೋಗಾಲಯ ಮೇಲ್ವಿಚಾರಕ ಹರಿಪ್ರಸಾದ್.ಡಿ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here