ಡಾ. ಶಾಂತಾಪುತ್ತೂರು ಅವರಿಂದ ʼದೇವನೆಲೆರ ಭೀರ್ಯ ಕೃತಿʼ ಬಿಡುಗಡೆ

0


ಪುತ್ತೂರು/(ಕೊಡಗು): ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಕನ್ನಡ ಭವನದ ಕೊಡಗು ಜಿಲ್ಲಾ ಘಟಕ ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕ ಮಡಿಕೇರಿಯ ಪತ್ರಿಕಾ ಭವನದಲ್ಲಿ ಮಾ.23ರಂದು ಉದ್ಘಾಟನೆಗೊಂಡಿತು. ಈ ಸಂದರ್ಭದಲ್ಲಿ ಕವಿಗೋಷ್ಠಿ, ಕೃತಿ ಬಿಡುಗಡೆ, ಪ್ರಶಸ್ತಿ ಪ್ರದಾನ, ಪದಗ್ರಹಣ ಸಮಾರಂಭ ನಡೆಯಿತು.


ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ ಬೊಳುವಾರು ನಿವಾಸಿ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯ ಸಂಚಾಲಕಿ ಡಾ.ಶಾಂತಾಪುತ್ತೂರು ಶ್ರೀಮತಿ ಅಜ್ಜಿ ಕುಟ್ಟಿರ ಭವ್ಯ ಬೋಪಣ್ಣ ರವರ ದೇವನೆಲೆರ ಭೀರ್ಯʼ ಕೃತಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕರು ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಕಾಸರಗೋಡು ಸ್ಥಾಪಕಾಧ್ಯಕ್ಷರಾದ ಡಾ.ವಾಮನ್ ರಾವ್ ಬೇಕಲ್, ಕನ್ನಡ ಭವನದ ಸಂಚಾಲಕಿ ಸಂಧ್ಯಾ ರಾಣಿ ಟೀಚರ್, ಕನ್ನಡ ಭವನ ಕೊಡಗು ಘಟಕದ ಅಧ್ಯಕ್ಷರಾದ ಬಿ.ಬೊಳ್ಳಜಿರ ಅಯ್ಯಪ್ಪ, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೊಡಗು ಘಟಕದ ಅಧ್ಯಕ್ಷೆ ರುಬೀನ ಎಂ.ಎ.ಕನ್ನಡ ಭವನ ಕೇಂದ್ರ ಸಮಿತಿ ಉಪಾಧ್ಯಕ್ಷರಾದ ರಾಜೇಶ್ ಚಂದ್ರಕೆ.ಪಿ, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷರಾದ ವಿರಾಜ್ ಅಡೂರು, ಹಿರಿಯ ಸಾಹಿತಿಗಳಾದ ಭಾರದ್ವಾಜ್ ಕೆ ಆನಂದ ತೀರ್ಥ, ಹಿರಿಯ ಸಾಹಿತಿ ನಾಗೇಶ್ ಕಾಲೂರು ಕೊಡಗು, ಬೊಟ್ಟೋಳಂಡ ನಿವ್ಯ ದೇವಯ್ಯ ಕಾರ್ಯದರ್ಶಿ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೊಡಗು, ಬಿ.ಜಿ.ಅನಂತಶಯನ ಅಧ್ಯಕ್ಷರು ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲೆ, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯ ಸಂಚಾಲಕ ಜಯಾನಂದ ಪೆರಾಜೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಡಾ.ಶಾಂತಾಪುತ್ತೂರುರವರಿಗೆ ಕೊಡಗು ಜಿಲ್ಲಾ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here