ಪುತ್ತೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪುತ್ತೂರು ಅಂಗನವಾಡಿ ಕೇಂದ್ರ ಇದರ ಆಶಯದಲ್ಲಿ ಪರ್ಲಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಮತ್ತು ಅಂಗನವಾಡಿ ಕೇಂದ್ರದ ಸಹಾಯಕಿಯಾಗಿ ಸೇವೆ ಸಲ್ಲಿಸಿದ ಸುಚಿತ್ರ ಬಿ ಎಸ್ ಇವರಿಗೆ ಬೀಳ್ಕೊಡುಗೆ ಸಮಾರಂಭ ಜರಗಿತು.
ನಗರಸಭೆ ಸದಸ್ಯೆ ವಿದ್ಯಾ ಗೌರಿ ಕಾರ್ಯಕ್ರಮ ಉದ್ಘಾಟಿಸಿದರು. ಅಂಗನವಾಡಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಶೈನಿ ಮಸ್ಕರೇನಸ್, ಅಂಗನವಾಡಿ ಕಾರ್ಯಕರ್ತೆ ಸುಮಿತ್ರ, ಪರ್ಲಡ್ಕ ಶಾಲೆಯ ಮುಖ್ಯ ಶಿಕ್ಷಕಿ ವತ್ಸಲಾ, ಬಾಲ ವಿಕಾಸ ಸಮಿತಿಯ ಸದಸ್ಯ ವಿಕ್ರಮ್ ಉಪಸ್ಥಿತರಿದ್ದರು.
ಬೀಳ್ಕೊಡುಗೆ:
ಸುಮಾರು ಏಳು ವರ್ಷಗಳ ಕಾಲ ಅಂಗನವಾಡಿಯಲ್ಲಿ ಸೇವೆ ಸಲ್ಲಿಸಿದ ಸುಚಿತ್ರ ಬಿ ಎಸ್ ಅವರನ್ನು ಅಂಗನವಾಡಿ ಸಮಿತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭ ಮಕ್ಕಳ ಮತ್ತು ಪೋಷಕರ ನೃತ್ಯ ಕಾರ್ಯಕ್ರಮ ನಡೆಯಿತು. ಪರ್ಲಡ್ಕ ಶಾಲೆಯ ಸಹ ಶಿಕ್ಷಕಿ ಸಾತ್ವಿಕ ಎ ಇವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಅಂಗನವಾಡಿ ಕೇಂದ್ರದ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸುಮಾ ವಂದಿಸಿದರು.